Thursday, September 19, 2024

ಪ್ರಾಯೋಗಿಕ ಆವೃತ್ತಿ

ಅತ್ಯಾಚಾರಿಗಳ ವಿರುದ್ಧ ಪ್ರತ್ಯೇಕ ಕಾನೂನು ಜಾರಿಯಾಗಲಿ : ಸುರೇಶ್

ಮಕ್ಕಳ ಮೇಲೆ ಅತ್ಯಾಚಾರ ನಡೆಸುವ ದುರುಳರ ವಿರುದ್ಧ ಸರ್ಕಾರ ಪ್ರತ್ಯೇಕ ಕಾನೂನು ಜಾರಿಗೊಳಿಸಬೇಕೆಂದು ಮಳವಳ್ಳಿಯಲ್ಲಿ ಇತ್ತೀಚೆಗೆ ಅತ್ಯಾಚಾರಕ್ಕೀಡಾಗಿ ಕೊಲೆಯಾದ ಬಾಲಕಿಯ ತಂದೆ ಸುರೇಶ್ ಒತ್ತಾಯಿಸಿದರು.

ಮಳವಳ್ಳಿ ಪಟ್ಟಣದಲ್ಲಿ ವಿವಿಧ ಮಹಿಳಾ ಪರ ಸಂಘಟನೆಗಳ ನೇತೃತ್ವದಲ್ಲಿ ನಡೆದ ಅತ್ಯಾಚಾರ ವಿರೋಧಿ ಆಂದೋಲನದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ನನ್ನ ಮಗಳಿಗಾದ ಸ್ಥಿತಿ ಯಾರ ಮಕ್ಕಳಿಗೂ ಆಗುವುದು ಬೇಡ, ಮಕ್ಕಳನ್ನು ದೇವರೆಂದು ಕರೆಯುತ್ತಾರೆ, ಇನ್ನೂ ಪ್ರಪಂಚವನ್ನೇ ನೋಡದ 12-14 ವರ್ಷ ವಯಸ್ಸಿನ ಮಕ್ಕಳ ಮೇಲೆ ದೌರ್ಜನ್ಯ ನಡೆಯುತ್ತಿರುವುದು ಆಂತಕ ತಂದಿದೆ, ಆದರೆ ಅಂತಹವರ ಮೇಲೆ ಅತ್ಯಾಚಾರದಂತಹ ನೀಚ ಕೃತ್ಯಗಳು ನಡೆಯುತ್ತಿರುವುದು ಪ್ರಪಂಚವೇ ತಲೆತಗ್ಗಿಸುವ ವಿಚಾರವಾಗಿದೆ.

ನನ್ನ ಮಗಳ ಪ್ರಕರಣದಲ್ಲಿ ಕೇವಲ 15 ದಿನಗಳಲ್ಲಿ ಪೊಲೀಸರು ಆರೋಪಿ ವಿರುದ್ಧ ದೋಷಾರೋಪಣೆ ಪಟ್ಟಿ ಸಲ್ಲಿಸಿ ಒಳ್ಳೆಯ ಕೆಲಸ ಮಾಡಿದ್ದಾರೆ. ಆ ನೀಚನನ್ನು ಕೂಡಲೇ ಗಲ್ಲಿಗೆ ಹಾಕಬೇಕು ಎಂದು ಆಗ್ರಹಿಸಿದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!