ಮಂಡ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪಿ.ಗಣಿಗ ರವಿಕುಮಾರ್ ಅವರು ಇಂದು ಮಂಡ್ಯ ನಗರದ ಮೈಷುಗರ್ ವೃತ್ತದಲ್ಲಿರುವ ಕ್ಯಾಥೋಲಿಕ್ ಚರ್ಚ್ ನಲ್ಲಿ ಕ್ರೈಸ್ತ ಬಾಂಧವರ ಮತಯಾಚಿಸಿದರು.
ಭಾನುವಾರ ಬೆಳಗ್ಗೆ 9.30 ಸಮಯದಲ್ಲಿ ಚರ್ಚ್ ಗೆ ಭೇಟಿ ನೀಡಿದ ಗಣಿಗ ರವಿಕುಮಾರ್ ಪ್ರಾರ್ಥನೆ ಮಾಡುತ್ತಿದ್ದ ಕ್ರೈಸ್ತ ಬಾಂಧವರ ಬಳಿ ತೆರಳಿ ಮತಯಾಚಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಗಣಿಗ ರವಿ ಕುಮಾರ್, ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದೆ. ನನಗೆ ಮಂಡ್ಯ ವಿಧಾನಸಭಾ ಕ್ಷೇತ್ರದಿಂದ ಶಾಸಕನಾಗಿ ಆಯ್ಕೆಯಾಗಲು ತಾವೆಲ್ಲರೂ ಆಶೀರ್ವದಿಸಬೇಕು ಎಂದು ಮನವಿ ಮಾಡಿದರು.
ಕಾಂಗ್ರೆಸ್ ಪಕ್ಷ ಸರ್ವ ಧರ್ಮಗಳನ್ನು ಸಮಾನವಾಗಿ ಕಾಣುವ ಏಕೈಕ ಪಕ್ಷ. ಇಂದು ದೇಶದಲ್ಲಿ ಅರಾಜಕತೆ ನಡೆಯುತ್ತಿದೆ. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಕ್ರೈಸ್ತ ಸಮುದಾಯದ ಬೇಡಿಕೆಗಳನ್ನು ಈಡೇರಿಸಲಿದೆ. ನಾನು ಕೂಡ ನನ್ನ ಶಕ್ತಿ ಮೀರಿ ನಿಮ್ಮ ಪರವಾಗಿ ಕೆಲಸ ಮಾಡುತ್ತೇನೆ ಎಂದರು.
ಈ ಸಂದರ್ಭದಲ್ಲಿ ನಗರಸಭಾ ಸದಸ್ಯರಾದ ರಾಮಲಿಂಗಯ್ಯ, ಶ್ರೀಧರ್, ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ರುದ್ರಪ್ಪ, ಸ್ವರ್ಣಸಂದ್ರ ಸೋಮು, ಸುಮನ್, ಜೋಸೆಫ್ ಸೇರಿದಂತೆ ಹಲವು ಮುಖಂಡರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.