Friday, September 20, 2024

ಪ್ರಾಯೋಗಿಕ ಆವೃತ್ತಿ

ನುಡಿದಂತೆ ನಡೆದ ನಾಯಕರಿಗೆ ಶಾಸಕ ರವಿಕುಮಾರ್ ಗೌಡ ಅಭಿನಂದನೆ

ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಜನತೆಗೆ ನೀಡಿದ ಐದು ಪ್ರಮುಖ ಭರವಸೆಗಳನ್ನು ಜಾರಿಗೊಳಿಸಿದ ಕಾಂಗ್ರೆಸ್ ನಾಯಕರಿಗೆ ಶಾಸಕ ಗಣಿಗ ರವಿಕುಮಾರ್ ಗೌಡ ಅಭಿನಂದನೆ ಸಲ್ಲಿಸಿದ್ದಾರೆ.

ಈ ಕುರಿತು ಹೇಳಿಕೆ ನೀಡಿರುವ ಅವರು, ಕಾಂಗ್ರೆಸ್ ಪಕ್ಷ ಚುನಾವಣೆಯಲ್ಲಿ ನುಡಿದಂತೆ ಪಂಚ ಭರವಸೆಗಳನ್ನು ಅಧಿಕಾರಕ್ಕೆ ಬಂದ ಮೊದಲ ದಿನವೇ ಸಚಿವ ಸಂಪುಟದಲ್ಲಿ ಒಪ್ಪಿಗೆ ನೀಡುವ ಮೂಲಕ ಈಡೇರಿಸಿ ಜನರ ವಿಶ್ವಾಸ ಉಳಿಸಿಕೊಂಡಿದೆ.ಕಾಂಗ್ರೆಸ್‌ ಪಕ್ಷ ನುಡಿದಂತೆ ನಡೆಯುವ ಪಕ್ಷವಾಗಿದ್ದು, ಮಾತಿಗೆ ಬದ್ಧವಾಗಿರುವ ಪಕ್ಷದ ಎಲ್ಲಾ ನಾಯಕರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ನಮ್ಮ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ,ರಾಹುಲ್‌ ಗಾಂಧಿ, ಪ್ರಿಯಾಂಕಾ ಗಾಂಧಿ, ಸಿದ್ದರಾಮಯ್ಯ,ಡಿ.ಕೆ. ಶಿವಕುಮಾರ್‌ ಅವರು ಚುನಾವಣೆಯ ಸಂದರ್ಭದಲ್ಲಿ ರಾಜ್ಯದ ಜನತೆಗೆ ಕೊಟ್ಟ
ಭರವಸೆಯಂತೆಯೇ ನಡೆದುಕೊಳ್ಳಲಾಗಿದೆ.

ಅದರಂತೆ ಇಂದು ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ, ಡಿ.ಕೆ. ಶಿವಕುಮಾರ್‌ ಅವರು ಉಪ ಮುಖ್ಯಮಂತ್ರಿಯಾಗಿ ಹಾಗೂ 8 ಮಂದಿ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ ಕೂಡಲೇ ಮೊದಲ ಕ್ಯಾಬಿನೆಟ್‌ ಸಭೆ ನಡೆಸಿ ಈ 5 ಗ್ಯಾರಂಟಿಗಳಿಗೆ ಒಪ್ಪಿಗೆ ನೀಡಿದ್ದಾರೆ.ಆ ಮೂಲಕ ನಮ್ಮ ನಾಯಕರು ರಾಜ್ಯದ ಜನತೆಗೆ ನೀಡಿದ್ದ ವಾಗ್ದಾನವನ್ನು ಈಡೇರಿಸಿದ್ದಾರೆ. ಇದಕ್ಕಾಗಿ ಅಭಿನಂದನೆ ಸಲ್ಲಿಸುತ್ತೇನೆ ಎಂದು ತಿಳಿಸಿದ್ದಾರೆ.

ಎಷ್ಟೇ ಆರ್ಥಿಕ ಹೊರೆ ಬಂದರೂ ಕೂಡಾ ನಿವಾರಣೆ ಮಾಡಿಕೊಂಡು, ರಾಜ್ಯದ ಜನರಿಗಾಗಿ ಈ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಕ್ಕೆ ತರುತ್ತಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಹೇಳಿದ್ದು,ನುಡಿದಂತೆ ನಡೆದ ಪಕ್ಷ ಕಾಂಗ್ರೆಸ್‌ ಹಾಗೂ ಭರವಸೆಯ ಗ್ಯಾರಂಟಿಯ ಸರ್ಕಾರ ನಮ್ಮದು ಎಂದಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!