Friday, September 20, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಕಸಾಪ ಜಿಲ್ಲಾಧ್ಯಕ್ಷ ರವಿಕುಮಾರ್ ಚಾಮಲಾಪುರ ನಿಧನ

ಮಂಡ್ಯ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸಿ. ಕೆ. ರವಿಕುಮಾರ್ ಚಾಮಲಾಪುರ (51) ನಿಧನರಾಗಿದ್ದಾರೆ.

ಕಳೆದ ಕೆಲವು ತಿಂಗಳ ಹಿಂದೆ ಮಂಚದಿಂದ ಬಿದ್ದಿದ್ದ ಅವರಿಗೆ ಬೆನ್ನುಹುರಿ ಮೂಳೆ ಮುರಿತಕ್ಕೊಳಗಾಗಿ ಚಿಕಿತ್ಸೆ ಪಡೆಯುತ್ತಿದ್ದರು. ನಿನ್ನೆಯಷ್ಟೆ ಚಿಕಿತ್ಸೆ ಪಡೆಯಲು ಮೈಸೂರಿನ ತೆರಳಿದ್ದರು ಎನ್ನಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವಿಗೀಡಾಗಿದ್ಧಾರೆ.

ಮಂಡ್ಯದ ಕಾವೇರಿ ನಗರದ ಅವರ ಮನೆಯ ಬಳಿ ಮಧ್ಯಾಹ್ನ 1 ಗಂಟೆಗೆ ಅಂತಿಮ ದರ್ಶನಕ್ಕೆ ಇಡಲಾಗುವುದು.  ನಂತರ ಮಂಡ್ಯ ತಾಲ್ಲೂಕಿನ ಅವರ ಸ್ವಗ್ರಾಮ ಚಾಮಲಾಪುರದಲ್ಲಿ ಮಧ್ಯಾಹ್ನ 3 ಗಂಟೆಗೆ ಅಂತಿಮ ಸಂಸ್ಕಾರ ನಡೆಯಲಿದೆ.

ಮಂಡ್ಯ ತಾಲ್ಲೂಕಿನ ಕೆರಗೋಡು ಹೋಬಳಿಯ ಚಾಮಲಾಪುರ ಗ್ರಾಮದ ಸಣ್ಣಮ್ಮ ಮತ್ತು ಸಿ.ಕಾಳೇಗೌಡ ದಂಪತಿ ಮಗನಾದ ಇವರು ಪ್ರಾಥಮಿಕ ಶಿಕ್ಷಣವನ್ನು ಹುಟ್ಟೂರಿನಲ್ಲೂ, ಪ್ರೌಢ ಶಿಕ್ಷಣವನ್ನು ಹುಲಿವಾನದಲ್ಲಿ ಮುಗಿಸಿ, ಪಿ.ಯು.ಸಿ ಮತ್ತು ಪದವಿ ಶಿಕ್ಷಣವನ್ನು ಮಂಡ್ಯದ ಪಿ.ಇ.ಎಸ್. ವಿಜ್ಞಾನ ಕಾಲೇಜಿನಲ್ಲಿ ಐಚ್ಛಿಕ ಕನ್ನಡ ವಿಷಯದೊಂದಿಗೆ ಪೂರೈಸಿದರು.

ಪಿ.ಯು.ಸಿ. ಮತ್ತು ಪದವಿ ವ್ಯಾಸಂಗ ಮಾಡುತ್ತಿರುವ ಸಂದರ್ಭದಲ್ಲಿಯೇ ವಿದ್ಯಾರ್ಥಿ ನಾಯಕರಾಗಿ ಹಲವಾರು ಕನ್ನಡ ಪರ ಕಾರ್ಯಕ್ರಮಗಳನ್ನು ರೂಪಿಸುತ್ತಾ ಸಂಘಟನೆಗೆ ಮುನ್ನುಡಿ ಬರೆದ ಇವರು, ವಿದ್ಯಾರ್ಥಿಗಳ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ನಿರಂತರವಾಗಿ ಹೋರಾಟದಲ್ಲಿ ತೊಡಗಿಸಿಕೊಂಡಿದ್ದರು.

1997 ರಿಂದ 2002 ರವರೆಗೆ ಮಂಡ್ಯದ ಪಿ.ಇ.ಎಸ್. ಸಂಜೆ ಪದವಿ ಕಾಲೇಜಿನಲ್ಲಿ, 2003-2007 ರವರೆಗೆ ಮಂಡ್ಯದ ಪಿ.ಇ.ಎಸ್. ಇಂಜಿನಿಯರಿಂಗ್ ಕಾಲೇಜಿನಲ್ಲಿ ಹಾಗೂ 2007 ರಿಂದ ಮಾಂಡವ್ಯ ವಿದ್ಯಾಸಂಸ್ಥೆ ಹಾಗೂ ಮಂಡ್ಯ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಕನ್ನಡ ಉಪನ್ಯಾಸಕರಾಗಿಯೂ ಸೇವೆ ಸಲ್ಲಿಸಿದ್ದರು.

ಮಂಡ್ಯ ಸಾಹಿತ್ಯ ಲಯನ್ಸ್ ಕ್ಲಬ್‌ನ ಅಧ್ಯಕ್ಷರಾಗಿ, ಉಚಿತ ಬೃಹತ್ ಆರೋಗ್ಯ ಮತ್ತು ಶಸ್ತ್ರಚಿಕಿತ್ಸಾ ಶಿಬಿರಗಳನ್ನು, ಕೆರಗೋಡು. ಚಾಮಲಾಪುರ, ಮಂಡ್ಯ ಮತ್ತು ಬಸರಾಳುವಿನಲ್ಲಿ ಆಯೋಜಿಸಿ ಜನತೆಗೆ ನೆರವಾಗಿದ್ದರು.

2015 ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಆಯ್ಕೆಯಾಗಿ ಹಲವು ಸಮ್ಮೇಳನಗಳನ್ನು ನಡೆಸಿ ಯುವ ಸಾಹಿತಿಗಳಿಗೆ ಹಾಗೂ ಕಲಾವಿದರನ್ನು ಪರಿಚಯಿಸುವ ಕೆಲಸ ಮಾಡಿದ್ದರು, ಮತ್ತೆ 2021 ರಲ್ಲಿ ನಡೆದ ಕಸಾಪ ಚುನಾವಣೆಯಲ್ಲಿ ಎರಡನೇ ಬಾರಿಗೆ ಆಯ್ಕೆಯಾಗಿ ಒಂದು ವರ್ಷ ಯಶಸ್ವಿ ಕಾರ್ಯಕ್ರಮಗಳನ್ನು ನಡೆಸಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!