ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕ ಗಣಿಗ ರವಿಕುಮಾರ್ ಅವರು ಇಂದು ನಗರದ ವಿವಿಧ ವಾರ್ಡುಗಳಲ್ಲಿ ನಡೆಯುತ್ತಿರುವ ಕಾಮಗಾರಿಗಳನ್ನು ವೀಕ್ಷಣೆ ಮಾಡಲಿದ್ದಾರೆ. ಇಂದು ಬೆಳಿಗ್ಗೆ 8ಗಂಟೆಗೆ ಮಂಡ್ಯ ನಗರದ ಗಾಂಧಿ ನಗರದಲ್ಲಿರುವ ನಡೆಯುತ್ತಿರುವ ಕಾಮಗಾರಿಗಳ ವೀಕ್ಷಣೆ ನಡೆಸುವರು.
ನಂತರ ಹೊಸಳ್ಳಿ ಗುರುಮಠ ತಾವರೆಗೆರೆಯಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಲಿದ್ದಾರೆ. ನಂತರ 10 ಗಂಟೆಗೆ ಮೂರನೇ ವಾರ್ಡಿನಲ್ಲಿ ನಡೆಯುತ್ತಿರುವ ಕಾಮಗಾರಿಯ ಪ್ರಗತಿ ಪರಿಶೀಲನೆ ನಡೆಸುವರು.
ಈ ಸಂದರ್ಭದಲ್ಲಿ ಸಾರ್ವಜನಿಕರಿಂದ ಅಹಾವಾಲು ಸ್ವೀಕರಿಸಲಿದ್ದು,ಈ ವಾರ್ಡುಗಳ ಜನತೆ ತಮ್ಮ ಕುಂದು-ಕೊರತೆಗಳನ್ನು ಶಾಸಕರಿಗೆ ಸಲ್ಲಿಸಬಹುದು ಎಂದು ತಿಳಿಸಲಾಗಿದೆ.