ದಿನವಿಡೀ ಸುರಿದ ಭಾರಿ ಮಳೆಗೆ ಶ್ರೀರಂಗಪಟ್ಟಣ ತಾಲೂಕಿನ ಹಲವೆಡೆ ರಸ್ತೆ ಕುಸಿದಿದ್ದು, ಅಪಾರ ಪ್ರಮಾಣದ ಬೆಳೆ ನಷ್ಟವಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ ಶಾಸಕ ರವೀಂದ್ರ ಶ್ರೀಕಂಠಯ್ಯ ಹಾಗೂ ಜೆಡಿಎಸ್ ಪಕ್ಷದ ಯುವನಾಯಕ ನಿಖಿಲ್ ಕುಮಾರಸ್ವಾಮಿ ಮಳೆಯಿಂದ ಹಾನಿಯಾಗಿರುವ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಬೆಂಗಳೂರು-ಮೈಸೂರು ಹೆದ್ದಾರಿಯ ಇಂಡುವಾಳು ಬಳಿ ನೀರಿನ ರಭಸಕ್ಕೆ ರಸ್ತೆ ಸಂಪೂರ್ಣವಾಗಿ ಕುಸಿದು ಬಿದ್ದಿದೆ.ಇಲ್ಲಿಗೆ ಭೇಟಿ ನೀಡಿದ ರವೀಂದ್ರ ಶ್ರೀಕಂಠಯ್ಯ ಆದಷ್ಟು ಬೇಗ ರಸ್ತೆ ಸರಿಪಡಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಂತರ ಮಳೆಯಿಂದ ಹಾನಿಗೊಳಗಾದ ಜಮೀನುಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಶಾಸಕರು ಸ್ಥಳದಲ್ಲೇ ತಹಶಿಲ್ದಾರ್ ರವರಿಗೆ ಕರೆ ಮಾಡಿ ರೈತರಿಗೆ ಬೆಳೆ ನಷ್ಟ ಪರಿಹಾರ ನೀಡುವಂತೆ ತಿಳಿಸಿದರು.