Friday, September 20, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯ| ರೆಬೆಲ್ ಕಪ್ ರಾಜ್ಯಮಟ್ಟದ ನೃತ್ಯ ಸ್ಪರ್ಧೆ: ಮಂಜುನಾಥ್

ರೆಬಲ್ ಡ್ಯಾನ್ಸ್ ಗ್ರೂಪ್ ಆಶ್ರಯದಲ್ಲಿ ರೆಬೆಲ್ ಕಪ್ ರಾಜ್ಯಮಟ್ಟದ ನೃತ್ಯ ಸ್ಪರ್ಧೆಯನ್ನು ಸೆಪ್ಟೆಂಬರ್ 1ರಂದು ಬೆಳಿಗ್ಗೆ 10 ಗಂಟೆಗೆ ಮಂಡ್ಯದ ಸುಭಾಷ್ ನಗರದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕನ್ನಡ ಸೇನೆ ಮಂಡ್ಯ ಜಿಲ್ಲಾ ಘಟಕದ ಅಧ್ಯಕ್ಷ ಮಂಜುನಾಥ್ ತಿಳಿಸಿದರು.

ಮಂಡ್ಯ ಪತ್ರಕರ್ತರ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ,ಕಳೆದ 20 ವರ್ಷಗಳಿಂದ ರೆಬೆಲ್ ಡ್ಯಾನ್ಸ್ ಗ್ರೂಪ್ ಕಾರ್ಯಕ್ರಮ ನಡೆಸುತ್ತಿದ್ದು, ಸಾಮಾಜಿಕ ಕಾರ್ಯಕ್ರಮಗಳನ್ನು ಮಾಡುತ್ತಾ ಸಮಾಜಕ್ಕೆ ಕೊಡುಗೆ ನೀಡಲಾಗುತ್ತಿದೆ ಎಂದರು.

ಯುವಕ ಯುವತಿಯರಿಗೆ ನೃತ್ಯವನ್ನು ಕಲಿಸಲಾಗುತ್ತಿದೆ. ಹಲವಾರು ಶಾಲೆಗಳಲ್ಲಿ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದ್ದು, ಡ್ಯಾನ್ಸ್ ಗ್ರೂಪ್ ತರಬೇತಿ ನೀಡಿದ ಭಾರತಿ ಕಾಲೇಜಿನ ವಿದ್ಯಾರ್ಥಿಗಳು ಈ ಬಾರಿಯ ದಸರಾ ಕಾರ್ಯಕ್ರಮಕ್ಕೆ ಆಯ್ಕೆಯಾಗಿದ್ದಾರೆ ಎಂದರು.

ಡ್ಯಾನ್ಸ್ ಗ್ರೂಪಿನ ಸಂಸ್ಥಾಪಕ ಅಧ್ಯಕ್ಷ ಅರ್ಜುನ್ ಮಾತನಾಡಿ, 60 ರಿಂದ 70 ತಂಡಗಳು ಸ್ಪರ್ಧೆಯಲ್ಲಿ ಭಾಗಿಯಾಗಲಿದ್ದಾರೆ, ಸೀನಿಯರ್, ಜೂನಿಯರ್, ಸಬ್ ಜೂನಿಯರ್ ವಿಭಾಗಗಳಲ್ಲಿ ಸ್ಪರ್ಧೆ ನಡೆಯಲಿದ್ದು, ಒಟ್ಟು ಎಲ್ಲಾ ವಿಭಾಗಕ್ಕೂ ಸೇರಿ ಒಂದೂವರೆ ಲಕ್ಷ ನಗದು ಬಹುಮಾನ ಹಾಗೂ ಪಾರಿತೋಷಕವನ್ನು ನೀಡಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ವಿಶೇಷ ಆಹ್ವಾನಿತರಾಗಿ ಖ್ಯಾತ ನಟ ಡಾ.ಶಿವರಾಜಕುಮಾರ್, ಕಾಂತಾರ ಸಿನಿಮಾದ ಖ್ಯಾತ ನಟಿ ಸಪ್ತಮಿ ಗೌಡ , ನೃತ್ಯ ಸಂಯೋಜಕ ಮೋಹನ್, ಶಾಸಕರಾದ ಗಣಿಗ ರವಿ ಕುಮಾರ್,ಕ ದಲೂರು ಉದಯ್, ಪಿಎಮ್ ನರೇಂದ್ರಸ್ವಾಮಿ, ಮಧು ಜಿ ಮಾದೇಗೌಡ, ಜೆಡಿಎಸ್ ಮುಖಂಡ ಬಿ.ಆರ್.ರಾಮಚಂದ್ರ , ಮಾಜಿ ಸಚಿವ ಡಿ ಸಿ ತಮ್ಮಣ್ಣ ,ಮಾಜಿ ಶಾಸಕ ಕೆ ಅನ್ನದಾನಿ, ಜನತಾ ಶಿಕ್ಷಣ ಸಂಸ್ಥೆ ಅಧ್ಯಕ್ಷ ಕೆ ಎಸ್ ವಿಜಯಾನಂದ, ಬಿಜೆಪಿ ಯುವ ಮುಖಂಡ ಅಶೋಕ ಜಯರಾಂ, ಜಿಲ್ಲಾಧಿಕಾರಿ ಡಾ.ಕುಮಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡೆ ಭಾಗವಹಿಸಲಿದ್ದಾರೆ ಎಂದರು .

ಗೋಷ್ಠಿಯಲ್ಲಿ ರೋಹಿತ್, ಪ್ರದೀಪ್ ,ಶಿವು, ರಾಂಲಾಲ್ ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!