Thursday, September 19, 2024

ಪ್ರಾಯೋಗಿಕ ಆವೃತ್ತಿ

ಭತ್ತ-ರಾಗಿ ಖರೀದಿಗೆ ನೋಂದಾಯಿಸಿ : ಜಿಲ್ಲಾಧಿಕಾರಿ

ರೈತರಿಂದ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಭತ್ತ ಮತ್ತು‌ ರಾಗಿ ಖರೀದಿಗಾಗಿ ನೋಂದಣಿ ಕಾರ್ಯ ನಡೆಯುತ್ತಿದ್ದು, ರೈತರು ಹೆಚ್ಚಿನ ಸಂಖ್ಯೆಯಲ್ಲಿ ನೋಂದಣಿ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಹೆಚ್.ಎನ್. ಗೋಪಾಲಕೃಷ್ಣ ತಿಳಿಸಿದರು.

ಮಂಡ್ಯ ಜಿಲ್ಲೆಯ ಯಲಿಯೂರು ಹಾಗೂ ಶ್ರೀರಂಗಪಟ್ಟಣ ನೋಂದಣಿ ಕೇಂದ್ರಗಳಿಗೆ ಗುರುವಾರ ಭೇಟಿ ನೀಡಿ  ಪರಿಶೀಲನೆ ನಡೆಸಿದ ಅವರು, ಡಿ.31ರವರೆಗೆ ನೋಂದಣಿ ಕಾರ್ಯ ನಡೆಯಲಿದ್ದು, ಜ.1ರಿಂದ ಮಾ.31ರ ವರೆಗೆ ಸರ್ಕಾರ ನಿಗದಿಪಡಿಸಿದ ಬೆಂಬಲ ಬೆಲೆಯಂತೆ ರೈತರಿಂದ ಭತ್ತ, ರಾಗಿಗಳನ್ನು ಖರೀದಿ ಮಾಡಲಾಗುವುದು ಎಂದರು.

ರೈತರು ಸೂಕ್ತ ದಾಖಲಾತಿಗಳನ್ನು ಒದಗಿಸಿ ರೈತರು ನೋಂದಣಿ ಮಾಡಿಕೊಳ್ಳುವುದರ ಜೊತೆಗೆ ಖರೀದಿ ಕೇಂದ್ರದಲ್ಲೇ ಭತ್ತ-ರಾಗಿಯನ್ನು ಮಾರಾಟ ಮಾಡಿ ಸರ್ಕಾರದ ಬೆಂಬಲ ಬೆಲೆ ಯೋಜನೆಯನ್ನು ಸದುಪಯೋಗಪಡಿಸಿಕೊಳ್ಳಬೇಕೆಂದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!