Friday, September 20, 2024

ಪ್ರಾಯೋಗಿಕ ಆವೃತ್ತಿ

ಬೆಂಗಳೂರು| ಗಣರಾಜ್ಯೋತ್ಸವ ಪಥಸಂಚಲನಕ್ಕೆ ಪಿಇಎಸ್ ವಿದ್ಯಾರ್ಥಿ ಆಯ್ಕೆ

ಜನವರಿ 26 ರಂದು ರಾಜ್ಯಪಾಲರ ಸಮ್ಮುಖದಲ್ಲಿ ಬೆಂಗಳೂರಿನ ಮಾಣಿಕ್ ಷಾ ಪೆರೇಡ್ ಗ್ರೌಂಡ್ ನಲ್ಲಿ ನಡೆಯುವ ಗಣರಾಜ್ಯೋತ್ಸವ ರಾಜ್ಯಪಥ ಸಂಚಲನದಲ್ಲಿ ಮಂಡ್ಯನಗರದ ಪಿ.ಇ .ಎಸ್ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ರಾಜು ಆಯ್ಕೆಯಾಗಿದ್ದಾರೆ.

ಈ ವಿದ್ಯಾರ್ಥಿಯು ಶಾಲಾ ಶಿಕ್ಷಣ ಇಲಾಖೆಯ (ಪದವಿ ಪೂರ್ವ) ರಾಷ್ಟ್ರೀಯ ಸೇವಾ ಯೋಜನಾ ಘಟಕದಿಂದ ಆಯ್ಕೆಯಾಗಿದ್ದು, ಇದೇ ಜನವರಿ 14ರಂದು ತರಬೇತಿಗಾಗಿ ಬೆಂಗಳೂರಿಗೆ ತೆರಳಿದ್ದಾರೆ.

ವಿದ್ಯಾರ್ಥಿ ರಾಜು, ಕಳೆದ ಜೂನ್ 2023 ರಲ್ಲಿ ಹರಿಯಾಣ ರಾಜ್ಯದಲ್ಲಿ ನಡೆದ ರಾಷ್ಟ್ರೀಯ ಭಾವೈಕ್ಯತಾ ಶಿಬಿರದಲ್ಲಿಯೂ ಸಹ ಭಾಗವಹಿಸಿ ಕಾಲೇಜಿಗೆ ಕೀರ್ತಿ ತಂದಿದ್ದರು. ಇವರಿಗೆ ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮಾಧಿಕಾರಿಗಳು ಅಭಿನಂದಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!