Sunday, May 19, 2024

ಪ್ರಾಯೋಗಿಕ ಆವೃತ್ತಿ

ಗೃಹಜ್ಯೋತಿ ಅನುಷ್ಟಾನ – ಗೃಹಲಕ್ಷ್ಮಿ ನೋಂದಣಿ ಪರಿಶೀಲಿಸಿದ ಪಿ.ಸಿ.ಜಾಫರ್

ಮಂಡ್ಯ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯಾಗಿ ಶುಕ್ರವಾರ ಅಧಿಕಾರ ಸ್ವೀಕರಿಸಿದ ಡಾ ಪಿ.ಸಿ ಜಾಫರ್ ಅವರು  ಇಂದು ಮಂಡ್ಯದ ಸುಭಾಷ್ ನಗರ ಬಡಾವಣೆಯಲ್ಲಿ ರಾಜ್ಯದ ಜನತೆಗೆ ಉಚಿತ ವಿದ್ಯುತ್ ಒದಗಿಸುವ ಸರ್ಕಾರದ ಮಹತ್ವಕಾಂಕ್ಷಿ ಗ್ಯಾರಂಟಿ ಯೋಜನೆಯಾದ ಗೃಹಜ್ಯೋತಿ ಅನುಷ್ಟಾನದ ಬಗ್ಗೆ ಮನೆ ಮನೆಗೆ ತೆರಳಿ ಪರಿಶೀಲನೆ ನಡೆಸಿದರು.

ಗೃಹಲಕ್ಷ್ಮಿ ನೋಂದಣಿ ಪರಿಶೀಲನೆ

nudikarnataka.com

ಜಿಲ್ಲೆಯಲ್ಲಿ‌ ಗೃಹಲಕ್ಷ್ಮಿ ನೊಂದಣಿ ಕೆಲಸಗಳ ಬಗ್ಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಪಿ.ಸಿ ಜಾಫರ್ ಅವರು ಇಂದು ಮಂಡ್ಯ ನಗರದ ಹಳೇ ತಾಲ್ಲೂಕು ಕಚೇರಿಯಲ್ಲಿರುವ ನೋಂದಣಿ ಕೇಂದ್ರಕ್ಕೆ ಭೇಟಿ ನೀಡಿ
ಪರಿಶೀಲನೆ ನಡೆಸಿ, ನೋಂದಣಿ ಕಾರ್ಯದಲ್ಲಿ ಆಗಿರುವ ಪ್ರಗತಿ ಪರಿಶೀಲಿಸಿದರು.

ಇದೇ ಸಂದರ್ಭಗಳಲ್ಲಿ ಜಿಲ್ಲಾಧಿಕಾರಿ ಡಾ. ಕುಮಾರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸೀಫ್ ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!