ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಗ್ರಾಮ-ಒನ್ ಸೇವಾ ಸಿಂಧು ಯೋಜನೆಯಡಿಯಲ್ಲಿ ಜನರಿಗೆ ಉತ್ತಮ ಸೇವೆ ನೀಡಿದ ಗ್ರಾಮ ಒನ್ ಸೇವಾ ಕೇಂದ್ರಗಳಿಗೆ ಬಹುಮಾನ ನೀಡಿ ಗೌರವಿಸಲಾಯಿತು.
ಕೆ.ಆರ್.ಪೇಟೆ ತಾಲ್ಲೂಕು ಆಡಳಿತ ಪಟ್ಟಣದ ಪುರಸಭಾ ಕಚೇರಿ ಬಳಿ ಇರುವ ಮೈದಾನದಲ್ಲಿ ಆಯೋಜಿಸಿದ್ದ 74ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ತಹಶೀಲ್ದಾರ್ ರೂಪ ಅವರು ಜನರಿಗೆ ಉತ್ತಮ ಸೇವೆ ನೀಡಿದ
ಚೌಡೇನಹಳ್ಳಿಯ ಗ್ರಾಮ ಒನ್ ಸೇವಾ ಕೇಂದ್ರದ ಸಿ.ಆರ್.ಸ್ವಾಮಿ, ನೀತಿಮಂಗಲದ ಪವಿತ್ರ,ಕೆ ಕಾರ್ ಸಿಂಧುಘಟ್ಟದ ಅಶೋಕ್ ಕುಮಾರ್ ಪ್ರಶಸ್ತಿ ಪತ್ರ ಮತ್ತು ಬಹುಮಾನ ನೀಡಿ ಗೌರವಿಸಿದರು.
ಈ ಸಂದರ್ಭದಲ್ಲಿ ಪುರಸಭೆಯ ಅಧ್ಯಕ್ಷೆ ಮಹಾದೇವಿ, ಉಪಾಧ್ಯಕ್ಷೆ ಗಾಯಿತ್ರಿ, ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಎಸ್. ಸೀತಾರಾಂ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಸಿ.ಎನ್.ಯತೀಶ್, ಕ್ಷೇತ್ರ ಸಮನ್ವಯಾಧಿಕಾರಿ ಲಿಂಗರಾಜು, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಶಿವಕುಮಾರ್, ವೃತ್ತ ನಿರೀಕ್ಷಕ ಎಂ.ಕೆ.ದೀಪಕ್, ಬಿಸಿಎಂ ಅಧಿಕಾರಿ ಎಂ.ಎನ್.ವೆಂಕಟೇಶ್, ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಚ್.ಆರ್.ಪೂರ್ಣಚಂದ್ರ ತೇಜಸ್ವಿ, ತಾಲ್ಲೂಕು ಸರ್ಕಾರಿ ನೌಕರರ ಅಧ್ಯಕ್ಷ ಸಿ.ಕೆ.ಶಿವರಾಮೇಗೌಡ, ರಾಜಸ್ವ ನಿರೀಕ್ಷಕಿ ಚಂದ್ರಕಲಾ, ಜಯಕರ್ನಾಟಕ ಸಂಘಟನೆಯ ಅಧ್ಯಕ್ಷ ಸೋಮಶೇಖರ್ ಸೇರಿದಂತೆ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.