ಮಂಡ್ಯ ತಾಲ್ಲೂಕಿನ ಬೂದನೂರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ 1.80 ಕೋಟಿ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಪಿ.ರವಿಕುಮಾರ್ (ಗಣಿಗ) ಗುದ್ದಲಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು.
ಹಳೇ ಬೂದನೂರು ಗ್ರಾಮದ ಮಂಗಯ್ಯನಗರ ಬಡಾವಣೆಯ ಲ್ಲಿ ಎಸ್’ಇಪಿ ಅನುದಾನದಲ್ಲಿ 80 ಲಕ್ಷ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ಇಂದು ಹೊಸ ಬೂದನೂರು ಗ್ರಾಮದಲ್ಲಿ ₹ 1 ಕೋಟಿ, ಉಮ್ಮಡಹಳ್ಳಿಯಲ್ಲಿ ₹ 1 ಕೋಟಿ ಹಾಗೂ ಬೆಳ್ಳುಂಡಗೆರೆಯಲ್ಲಿ 50 ಲಕ್ಷ ವೆಚ್ಚದ ಕಾಮಗಾರಿಗೆ ಚಾಲನೆ ನೀಡಲಾಗಿದೆ ಎಂದು ಮಾಹಿತಿ ನೀಡಿದರು.
ಇದೇ ವೇಳೆ ಸಾರ್ವಜನಿಕರ ಅಹವಾಲು ಸ್ವೀಕರಿಸಿದರು. ಬೂದನೂರು ಸರ್ಕಾರಿ ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಅಭಿಯಾನದಡಿ ಸರ್ಕಾರಿ ಪ್ರೌಢಶಾಲೆ ಬಲವರ್ಧನೆ ಕಟ್ಟಡ ಕಳೆದ 9 ವರ್ಷಗಳಿಂದ ಕಾಮಗಾರಿ ನಡೆಸಿದರೂ ಅಪೂರ್ಣಗೊಂಡಿರುವುದರ ವಿರುದ್ದ ಕ್ರಮ ಕೈಗೊಳ್ಳುವಂತೆ ಬಿಇಒಗೆ ಸೂಚಿಸಿದರು.
ಈ ವೇಳೆ ಮನ್’ಮುಲ್ ನಿರ್ದೇಶಕ ಉಮ್ಮಡಹಳ್ಳಿ ಶಿವಪ್ಪ, ಮುಖಂಡರಾದ ಬಿ.ಟಿ.ಚಂದ್ರಶೇಖರ್, ಗ್ರಾಪಂ ಅಧ್ಯಕ್ಷೆ ಅರುಣ, ಪಿಡಿಒ ವಿನಯ್’ಕುಮಾರ್ ಗ್ರಾಪಂ ಮಾಜಿ ಸದಸ್ಯ ಶಂಕರಯ್ಯ, ಎಂ.ಚಂದ್ರಶೇಖರ್ ಮೊದಲಾದವರಿದ್ದರು.