Thursday, September 19, 2024

ಪ್ರಾಯೋಗಿಕ ಆವೃತ್ತಿ

ಮನೆಯಲ್ಲಿದ್ದವರ ಮೇಲೆ ಮಾರಕಾಸ್ತ್ರಗಳಿಂದ ದಾಳಿ: ದರೋಡೆ

ಒಂಟಿ ಮನೆಯೊಂದಕ್ಕೆ ನುಗ್ಗಿ, ಮನೆಯಲ್ಲಿದ್ದವರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿರುವ ದುಷ್ಕರ್ಮಿಗಳು, ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನಲ್ಲಿ ನಡೆದಿದೆ.

ನಾಗಮಂಗಲ ತಾಲೂಕಿನ ಚಾಮಲಾಪುರ ಗೇಟ್‌ನಲ್ಲಿ ಘಟನೆ ನಡೆದಿದೆ. ಕಾರಿನಲ್ಲಿ ಬಂದ ನಾಲ್ಕು ಮಂದಿ ದರೋಡೆಕೋರರು ಒಂಟಿ ಮನೆಗೆ ನುಗ್ಗಿ, ಮನೆಯಲ್ಲಿದ್ದವರ ಮೇಲೆ ಹಲ್ಲೆ ನಡೆಸಿದ್ದಾರೆ. ಬೆಲೆ ಬಾಳುವ ವಸ್ತುಗಳನ್ನು ದೋಚಿ ಪರಾರಿಯಾಗಿದ್ದಾರೆ.

ಘಟನೆಯಲ್ಲಿ ಮನೆ ಮಾಲೀಕ ಮಂಜುನಾಥ್ ಅವರಿಗೆ ಗಂಭೀರ ಗಾಯಗಳಾಗಿವೆ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಮಂಜುನಾಥ್ ಅವರ ಪತ್ನಿ, ತಂದೆ, ತಾಯಿ ಹಾಗೂ ಮಗಳ ಮೇಲೂ ಹಲ್ಲೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಘಟನೆ ವೇಳೆ ಮಂಜುನಾಥ್‌ ಅವರು ತಮ್ಮ ಸೋದರನಿಗೆ ಕರೆ ಮಾಡಿದ್ದಾರೆ. ಘಟನೆ ಬಗ್ಗೆ ಅರಿತ ಸೋದರ ಸ್ಥಳ ಬಂದು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!