Saturday, May 18, 2024

ಪ್ರಾಯೋಗಿಕ ಆವೃತ್ತಿ

ಗ್ರಾಮೀಣ ಪ್ರದೇಶಗಳಿಗೆ ಮೂಲ ಸೌಕರ್ಯ ಒದಗಿಸಲು ಶ್ರಮ : ಡಿ.ಸಿ.ತಮ್ಮಣ್ಣ

ವರದಿ : ಪ್ರಭು ವಿ ಎಸ್

ಗ್ರಾಮೀಣ ಪ್ರದೇಶಗಳಿಗೆ ಗುಣಮಟ್ಟದ ಮೂಲ ಸೌಕರ್ಯ ಒದಗಿಸಲು ಶ್ರಮಿಸಲಾಗುತ್ತಿದೆ ಎಂದು ಶಾಸಕ ಡಿಸಿ ತಮ್ಮಣ್ಣ ತಿಳಿಸಿದರು.

ಮದ್ದೂರಿನ ತಾಲೂಕಿನ ಹೆಮ್ಮನಹಳ್ಳಿ, ಕದಲೂರು, ಮಲ್ಲನಕುಪ್ಪೆ ಗ್ರಾಮಗಳಲ್ಲಿ ಒಂದೂವರೆ ಕೋಟಿ ರೂ ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆ ಮತ್ತು ಸಿ ಸಿ ಚರಂಡಿ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಅವರು ಮಾತನಾಡಿದರು,

ಮದ್ದೂರು ವಿಧಾನಸಭಾ ಕ್ಷೇತ್ರದಲ್ಲಿ ಶಿಕ್ಷಣಕ್ಕೆ ನನ್ನ ಅವಧಿಯಲ್ಲಿ ಹೆಚ್ಚು ಒತ್ತು ನೀಡಲಾಗಿದೆ ಜೊತೆಗೆ ಗ್ರಾಮೀಣ ಭಾಗಕ್ಕೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಮೂಲಭೂತ ಸೌಕರ್ಯ ಅಭಿವೃದ್ಧಿಗೂ ಕ್ರಮ ವಹಿಸಲಾಗಿದೆ ಎಂದರು.

ಜೆಡಿಎಸ್ ಪಕ್ಷವು ನುಡಿದಂತೆ ನಡೆಯುವ ಪಕ್ಷವಾಗಿದ್ದು ಈ ಹಿಂದೆ ಘೋಷಿಸಿದಂತೆ ರೈತರ ಸಾಲ ಸಂಪೂರ್ಣ ಮನ್ನಾ ಮಾಡಲಾಯಿತು ಈ ಬಾರಿ ಪಂಚರತ್ನ ಯೋಜನೆಗಳನ್ನು ಘೋಷಿಸಿದ್ದು ರಾಜ್ಯದ ಜನರ ಮತ್ತು ರೈತರ ಜೀವನವನ್ನು ಉತ್ತಮಪಡಿಸುವ ಯೋಜನೆಗಳನ್ನು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಜಾರಿಗೆ ತರಲಿದ್ದಾರೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಗ್ರಾ ಪಂ ಅಧ್ಯಕ್ಷ ರವಿ, ಗ್ರಾ ಪಂ ಸದಸ್ಯ ಗಂಗರಾಜು. ಹೇಮಕುಮಾರಿ, ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿಳಿಯಪ್ಪ, ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ರವಿ, ಸೇರಿದಂತೆ ಅನೇಕರು ಉಪಸ್ಥಿತರಿದ್ದರು,

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!