Friday, September 20, 2024

ಪ್ರಾಯೋಗಿಕ ಆವೃತ್ತಿ

ಎಸ್.ಅಶ್ವತಿ ಅವರಿಗೆ ಬೀಳ್ಕೊಡುಗೆ ನೀಡಿದ ಸಿಬ್ಬಂದಿಗಳು

ಪಶು ಸಂಗೋಪನ ಇಲಾಖೆಯ ನಿರ್ದೇಶಕರಾಗಿ ವರ್ಗಾವಣೆಗೊಂಡ ಎಸ್.ಅಶ್ವತಿ ಅವರನ್ನು ಜಿಲ್ಲಾಧಿಕಾರಿ ಕಚೇರಿಯ ಸಿಬ್ಬಂದಿ ವರ್ಗದವರು ಆತ್ಮೀಯವಾಗಿ ಸನ್ಮಾನಿಸಿ ಬೀಳ್ಕೊಟ್ಟರು.
ಈ ಸಂದರ್ಭದಲ್ಲಿ ಅಶ್ವತಿಯವರು ನನಗೆ ಮಂಡ್ಯ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುವ ಸಂದರ್ಭದಲ್ಲಿ ಸಹಕಾರ ನೀಡಿದ ಸಿಬ್ಬಂದಿಗಳಿಗೆ ಧನ್ಯವಾದ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿಯ ಸಿಬ್ಬಂದಿಗಳು ಕೂಡ ಎಸ್.ಅಶ್ವತಿ ಅವರೊಂದಿಗೆ ಕೆಲಸ ಮಾಡಿದ ದಿನಗಳನ್ನು ಪರಸ್ಪರ ನೆನೆಪಿಸಿಕೊಂಡರು. ಅಶ್ವತಿ ಅವರಿಗೆ ಪುಷ್ಪ ಗುಚ್ಛ ನೀಡಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಎಂಸಿಎ ಕಚೇರಿ ಸಿಬ್ಬಂದಿ ಮಹೇಂದ್ರ ಪ್ರಸಾದ್ ಅವರು ಅವು ರಚಿಸಿದ ಅಶ್ವತಿ ಅವರ ಭಾವಚಿತ್ರವನ್ನು ನೀಡಿದರು. ತಮ್ಮ ಭಾವಚಿತ್ರ ಅದ್ಭುತವಾಗಿ ಮೂಡಿಬಂದಿದೆ ಎಂದು ಅಶ್ವತಿಯವರು ಮಹೇಂದ್ರ ಪ್ರಸಾದ್ ಅವರಿಗೆ ಧನ್ಯವಾದ ಸಲ್ಲಿಸಿದರು.

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಎಚ್.ಎಲ್.ನಾಗರಾಜು,ಉಪವಿಭಾಗಾಧಿಕಾರಿ ಬಿ.ಸಿ.ಶಿವಾನಂದ ಮೂರ್ತಿ, ವಾರ್ತಾಧಿಕಾರಿ ನಿರ್ಮಲ ಸೇರಿದಂತೆ ಜಿಲ್ಲಾಧಿಕಾರಿ ಕಚೇರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!