Saturday, May 18, 2024

ಪ್ರಾಯೋಗಿಕ ಆವೃತ್ತಿ

ಎಸ್.ಎಂ.ಕೃಷ್ಣ ಚೇತರಿಕೆಗೆ ವಿಶೇಷ ಪೂಜೆ

ದೇಶಕ್ಕೆ ಮತ್ತು ರಾಜ್ಯಕ್ಕೆ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರು ನೀಡಿರುವ ಕೊಡುಗೆ ಅಪಾರವಾಗಿದ್ದು,
ದೇವರ ದಯೆಯಿಂದ ಅವರು ಶೀಘ್ರ ಗುಣಮುಖರಾಗಲೆಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸಿ.ಪಿ‌‌.ಉಮೇಶ್ ತಿಳಿಸಿದರು.

ಮದ್ದೂರು ಪಟ್ಟಣದ ಪುರಾಣ ಪ್ರಸಿದ್ಧ ಶ್ರೀ ಹೊಳೆ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಇಂದು ಎಸ್‌.ಎಂ‌.ಕೃಷ್ಣ ಅವರು ಶೀಘ್ರ ಗುಣಮುಖರಾಗಲೆಂದು ವಿಶೇಷ ಪೂಜೆ ಸಲ್ಲಿಸಿ ಮಾತನಾಡಿದರು.

ಮುಖ್ಯಮಂತ್ರಿಯಾಗಿ, ವಿದೇಶಾಂಗ ಸಚಿವರಾಗಿ, ರಾಜ್ಯಪಾಲರಾಗಿ ಹಲವಾರು ಉನ್ನತ ಹುದ್ದೆಗಳನ್ನು ಅಲಂಕರಿಸಿ ಜನರಿಗೆ ಹಾಗೂ ದೇಶಕ್ಕೆ ಅನುಕೂಲವಾಗುವಂತಹ ಹಲವಾರು ಯೋಜನೆಗಳನ್ನು ಜಾರಿಗೆ ತರುವ ಮೂಲಕ ಅನುಕೂಲ ಕಲ್ಪಿಸಿದ್ದಾರೆ.

ಸರಳ,ಸಜ್ಜನಿಕೆಗೆ ಹೆಸರುವಾಸಿಯಾದ ಎಸ್.ಎಂ‌.ಕೃಷ್ಣ ಅವರು, ರೈತ, ಕೂಲಿ ಕಾರ್ಮಿಕ, ಹಿಂದುಳಿದ, ಅಲ್ಪ ಸಂಖ್ಯಾತ ಸೇರಿದಂತೆ ಎಲ್ಲಾ ವರ್ಗದವರಿಗೂ ಅನುಕೂಲ ಕಲ್ಪಿಸಿದ್ದಾರೆ. ಅವರು ರಾಜ್ಯದ ಮುಖ್ಯಮಂತ್ರಿಯಾಗಿ ಹಲವಾರು ಜನಪರ ಕಾರ್ಯಕ್ರಮಗಳನ್ನು ಜನರಿಗೆ ನೀಡಿದ್ದಾರೆ. ಸದಾ ಜನರ‌ ಪರವಾಗಿ ಆಲೋಚಿಸುತ್ತಿದ್ದ ಅವರನ್ನು ದೇವರು ಶೀಘ್ರವಾಗಿ ಗುಣಮುಖರಾಗಿವಂತೆ ಮಾಡಿ, ಮತ್ತಷ್ಟು ಜನಪರ ಕೆಲಸ ಮಾಡಲು ಉತ್ತಮ ಆರೋಗ್ಯ ಮತ್ತು ಆಯಸ್ಸು ನೀಡಲಿ ಎಂದು ಪ್ರಾರ್ಥಿಸಿದರು.

ಬಿಜೆಪಿ ಮುಖಂಡರಾದ ಡಾ.ಇಂದ್ರೇಶ್, ಹೊನ್ನಲಗೆರೆ ಸ್ವಾಮಿ, ಪೂರ್ಣಿಮ, ಸಿಂಧು ಸೇರಿದಂತೆ ಮತ್ತಿತರದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!