Thursday, May 16, 2024

ಪ್ರಾಯೋಗಿಕ ಆವೃತ್ತಿ

ಶ್ರೀರಂಗಪಟ್ಟಣ | ಬಿಜೆಪಿ ಅಭ್ಯರ್ಥಿ ಎಸ್.ಸಚ್ಚಿದಾನಂದ ವಿರುದ್ಧ ದಾಖಲಾಯ್ತು ಎಫ್ಐಆರ್

ಪ್ರಚೋದನಕಾರಿ ಭಾಷಣ ಮಾಡಿದ ಹಿನ್ನೆಲೆಯಲ್ಲಿ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಎಸ್.ಸಚ್ಚಿದಾನಂದ ವಿರುದ್ಧ ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಕಳೆದ ಏಪ್ರಿಲ್ 29 ರಂದು ಕ್ಷೇತ್ರ ವ್ಯಾಪ್ತಿಯ ಕೊತ್ತತ್ತಿಯಲ್ಲಿ ನಡೆದ ಬಿಜೆಪಿ ರಾಜಕೀಯ ಸಮಾವೇಶದಲ್ಲಿ ಶ್ರೀರಂಗಪಟ್ಟಣದಲ್ಲಿರುವ ಜಾಮೀಯಾ ಮಸೀದಿ ಜಾಗದಲ್ಲಿ ಮೂಲ ಅಂಜನೇಯಸ್ವಾಮಿ ದೇವಸ್ಥಾನವನ್ನು ಪ್ರತಿಷ್ಠಾಪಿಸಬೇಕೆಂದು ಹೇಳಿದ್ದರು. ಈ ಪ್ರಚೋದನಕಾರಿ ಭಾಷಣದ ವಿರುದ್ದ ಚುನಾವಣಾ ಕಾರ್ಯಕ್ಕೆ ನಿಯೋಜನೆಗೊಂಡಿದ್ದ ವಿಶೇಷ ಜಾಗೃತದಳ ರವೀಂದ್ರ ಎಂಬ ಅಧಿಕಾರಿ ನೀಡಿದ ದೂರಿನನ್ವಯ ಎಫ್ಐಆರ್ ದಾಖಲಾಗಿದೆ.

ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಆರೋದಡಿ ಸಚ್ಚಿದಾನಂದ ವಿರುದ್ದ IPC ಸೆಕ್ಷನ್ 505(2) ಅಡಿ ಪ್ರಕರಣ ದಾಖಲಿಸಲಾಗಿದೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!