Saturday, May 4, 2024

ಪ್ರಾಯೋಗಿಕ ಆವೃತ್ತಿ

ವಿದ್ಯಾರ್ಥಿಗಳಿಗೆ ನೋಟ್‌ಬುಕ್ ವಿತರಿಸಿದ ಸಚ್ಚಿದಾನಂದ

ಮಕ್ಕಳ ವಿದ್ಯಾಭ್ಯಾಸಕ್ಕೆ ನೆರವಾಗುವ ಉದ್ದೇಶದಿಂದ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಯುವ ಮುಖಂಡ ಇಂಡುವಾಳು ಸಚ್ಚಿದಾನಂದ ನೋಟ್‌ಬುಕ್ ವಿತರಿಸಿದರು.

ಶ್ರೀರಂಗಪಟ್ಟಣ ತಾಲೂಕಿನ ಚಿಕ್ಕ‌ಅಂಕನಹಳ್ಳಿ, ಹೆಬ್ಬಾಡಿ, ಹೆಬ್ಬಾಡಿಹುಂಡಿ, ಹುರುಳಿಕ್ಯಾತನಹಳ್ಳಿ, ಹಂಪಾಪುರ, ಬೊಂತಗಳ್ಳಿಹುಂಡಿ ಗ್ರಾಮಗಳ ಸರ್ಕಾರಿ ಶಾಲೆಯ ನೂರಾರು ವಿದ್ಯಾರ್ಥಿಗಳಿಗೆ ಇಂದು ಶ್ರೀ ಶಂಕರೇಗೌಡ ಚಾರಿಟಬಲ್ ಟ್ರಸ್ಟ್ (ರಿ) ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ನೋಟ್‌ಬುಕ್ ವಿತರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಚ್ಚಿದಾನಂದ,ಗ್ರಾಮೀಣ ಪ್ರದೇಶದ ಮಕ್ಕಳು ಉತ್ತಮ ಗುಣಮಟ್ಟದ ವಿದ್ಯಾಭ್ಯಾಸ ಪಡೆಯಬೇಕೆನ್ನುವ ದೃಷ್ಟಿಯಿಂದ ನಮ್ಮ ಟ್ರಸ್ಟ್ ವತಿಯಿಂದ ನೋಟ್ ಪುಸ್ತಕಗಳನ್ನ ವಿತರಿಸಲಾಗಿದೆ. ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದು ಉತ್ತಮವಾಗಿ ಅಂಕ ಗಳಿಸುವ ಮೂಲಕ ಶಾಲೆಗೆ ಮತ್ತು ಪೋಷಕರಿಗೆ ಕೀರ್ತಿ ತರಬೇಕೆಂದು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಮಾಜಿ ತಾಲೂಕು ಪಂಚಾಯಿತಿ ಅಧ್ಯಕ್ಷ ಟಿ.ಶ್ರೀಧರ್, ಮೇಳಾಪುರ ಗ್ರಾ.ಪಂ ಅಧ್ಯಕ್ಷ ಬೆಟ್ಟೇಗೌಡ, ಎಸ್.ಡಿ.ಎಂ.ಸಿ ಅಧ್ಯಕ್ಷರು, ಗ್ರಾ.ಪಂ ಸದಸ್ಯರು, ಗ್ರಾಮದ ಯಜಮಾನರು, ಮುಖಂಡರು, ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!