ಮಂಡ್ಯನಗರದಲ್ಲಿ ಜಿಲ್ಲಾ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಪಕ್ಷದ ಜಿಲ್ಲಾ ಪ್ರತಿನಿಧಿ ಕೌನ್ಸಿಲ್ ಸಭೆ ಭಾನುವಾರ ನಡೆಯಿತು.
ಸಭೆಯ ಉದ್ಘಾಟನಾ ಭಾಷಣ ಮಾಡಿದ ಜಿಲ್ಲಾಧ್ಯಕ್ಷ ಸಾದತ್, SDPI ಪಕ್ಷ ಜನರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ನಿರಂತರವಾಗಿ ಹೋರಾಟ ಮಾಡುತ್ತಿರುವುದರಿಂದ, ಜನರ ಬೆಂಬಲ ಪರಿಣಾಮಕಾರಿಯಾಗಿ ಸಿಗುತ್ತಿದೆ. ಮುಂಬರುವ ದಿನಗಳಲ್ಲಿ ಪಕ್ಷದ ಬೆಳವಣಿಗೆಗೆ ಇನ್ನು ಹೆಚ್ಚಿನ ರೀತಿಯಲ್ಲಿ ಆಗುತ್ತದೆ ಎಂದು ಆಶಾಭಾವನೆ ವ್ಯಕ್ತಪಡಿಸಿದರು.
ಜಿಲ್ಲಾ ಕಾರ್ಯದರ್ಶಿ ಅತೀಕ್ ಪಕ್ಷದ ಕಾರ್ಯ ಚಟುವಟಿಕೆಗಳ ಕುರಿತು ವರದಿ ಮಂಡಿಸಿದರು. ಜಿಲ್ಲಾ ಉಪಾಧ್ಯಕ್ಷರಾದ ಮುಬಾರಕ್ ಸ್ವಾಗತಿಸಿದರು, ರಾಜ್ಯ ಸಮಿತಿ ಸದಸ್ಯರಾದ ಅಬ್ರಾರ್ ಆಹಮ್ಮದ್ ಸಭೆಯ ವೀಕ್ಷಕರಾಗಿದ್ದರು, ಮೈಸೂರಿನ ಅಕ್ರಮ್ ಸಕಾರಾತ್ಮಕ ನಾಯಕತ್ವದ ಗುಣಗಳ ಕುರಿತು ಉಪನ್ಯಾಸ ನೀಡಿದರು. ಅಜ್ಗರ್ ರವರು ಕಾರ್ಯಕ್ರಮದ ನಿರೂಪಣೆ ಮಾಡಿದರು.