ಪಿಯುಸಿ ಪರೀಕ್ಷೆಗಳನ್ನು ಗಮನದಲ್ಲಿಟ್ಟುಕೊಂಡು ಕಾಂಗ್ರೆಸ್ ಮಾರ್ಚ್ 9 ರ ‘ಕರ್ನಾಟಕ ಬಂದ್’ ಕರೆಯನ್ನು ಹಿಂಪಡೆಯಲು ಪೋಷಕರು ಮತ್ತು ವಿದ್ಯಾರ್ಥಿಗಳು ನನ್ನನ್ನು ಮತ್ತು ಸಿಎಲ್ಪಿ ನಾಯಕರನ್ನು ಸಂಪರ್ಕಿಸಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಠಿಯಿಂದ ಬಂದ್ ವಾಪಸ್ ಪಡೆಯಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಕೆಪಿಸಿಸಿಯಿಂದ ನಾಳೆಗೆ ಕರೆ ನೀಡಿದ್ದ ಕರ್ನಾಟಕ ಬಂದ್ನ್ನು ಹಿಂಪಡೆಯಲಾಗಿದೆ.
ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯುತ್ತಿರುವ ಹಿನ್ನೆಲೆ ಶಿಕ್ಷಣ ಸಂಸ್ಥೆಗಳು, ವಿದ್ಯಾರ್ಥಿ – ಪೋಷಕರ ಮನವಿ ಮೇರೆಗೆ ಬಂದ್ ಹಿಂಪಡೆಯಲಾಗಿದೆ.
ಮುಂದಿನ ಹೋರಾಟಕ್ಕೆ ಸಂಬಂಧಿಸಿದಂತೆ ಸ್ಕ್ರೀನಿಂಗ್ ಕಮಿಟಿ ಸಭೆ ಬಳಿಕ ಚರ್ಚಿಸಿ ತೀರ್ಮಾನಿಸಲಾಗುವುದು.
– @RLR_BTM pic.twitter.com/x3wmep7Ds6— Karnataka Congress (@INCKarnataka) March 8, 2023
“>
ನಾವು ವಿದ್ಯಾರ್ಥಿಗಳಿಗೆ ಮೊದಲ ಆದ್ಯತೆ ನೀಡುತ್ತೇವೆ, ಆದ್ದರಿಂದ ಬಂದ್ ಹಿಂಪಡೆಯಲು ಕೆಪಿಸಿಸಿ ನಿರ್ಧರಿಸಿದೆ. ಬಿಜೆಪಿ ಭ್ರಷ್ಟಾಚಾರದ ವಿರುದ್ಧ ನಮ್ಮ ಹೋರಾಟ ಮುಂದುವರಿಯುತ್ತದೆ ಎಂದು ಅವರು ತಿಳಿಸಿದ್ದಾರೆ. ಮಾ.9ರಿಂದ ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಗಳು ಪ್ರಾರಂಭವಾಗಲಿದ್ದು, ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಠಿಯಿಂದ ಕರ್ನಾಟಕ ಬಂದ್ ಅನ್ನು ವಾಪಸ್ ಪಡೆದಿದ್ದೇವೆಂದರು.
ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯುತ್ತಿರುವ ಹಿನ್ನೆಲೆ ಶಿಕ್ಷಣ ಸಂಸ್ಥೆಗಳು, ವಿದ್ಯಾರ್ಥಿ – ಪೋಷಕರ ಮನವಿ ಮೇರೆಗೆ ಬಂದ್ ಹಿಂಪಡೆಯಲಾಗಿದೆ. ಮುಂದಿನ ಹೋರಾಟಕ್ಕೆ ಸಂಬಂಧಿಸಿದಂತೆ ಸ್ಕ್ರೀನಿಂಗ್ ಕಮಿಟಿ ಸಭೆ ಬಳಿಕ ಚರ್ಚಿಸಿ ತೀರ್ಮಾನಿಸಲಾಗುವುದು ಎಂದು ತಿಳಿಸಿದರು.