ಮಳವಳ್ಳಿ ತಾಲ್ಲೂಕಿನಲ್ಲಿ ಅಕ್ರಮವಾಗಿ ಸೀಮೆಎಣ್ಣೆ ಸಾಗಿಸುತ್ತಿದ್ದ ವ್ಯಕ್ತಿಯನ್ನು ಬಂಧಿಸಿ, ಆತನಿಂದ 73 ಲೀ ಸೀಮೆಎಣ್ಣೆ ಹಾಗೂ ಹೋಂಡಾ ಆಕ್ಟಿವ್ ಸ್ಕೂಟರ್’ನ್ನು ವಶಪಡಿಸಿಕೊಳ್ಳಲಾಗಿದೆ.
ಮದ್ದೂರು ತಾಲ್ಲೂಕಿನ ಕರಡಕೆರೆಯ ಹನುಮಂತೇಗೌಡ ಬಂಧಿತ ಆರೋಪಿ.
ಬುಧವಾರ ರಾತ್ರಿ ಸೀಮೆಎಣ್ಣೆ ಸಾಗಿಸುತ್ತಿರುವ ಖಚಿತ ಮಾಹಿತಿ ಮೇರೆಗೆ ಆಹಾರ ನಿರೀಕ್ಷಕ ಧರ್ಮೆಂದ್ರ ಹಾಗೂ ಗ್ರಾಮ ಆಡಳಿತಾಧಿಕಾರಿ ಶಿವಕುಮಾರ್ ಬಿ ಜಮಖಂಡಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಅಕ್ರಮ ಪತ್ತೆ ಹಚ್ಚುವಲ್ಲಿ ಯಶಸ್ವಿಯಾಯಿತು. ಈ ಸಂಬಂಧ ಹಲಗೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.