ಸಾಹಿತ್ಯ ಮತ್ತು ಸಂಘಟನಾ ಕ್ಷೇತ್ರದಲ್ಲಿ ಸಲ್ಲಿಸಿರುವ ಗಣನೀಯ ಸೇವೆ ಮತ್ತು ಸಾಧನೆಗಾಗಿ ಜಿಲ್ಲಾ ಯುವ ಬರಹಗಾರರ ಬಳಗದ ಅಧ್ಯಕ್ಷ ಹಾಗೂ ಸಾಹಿತಿ ಮಂಗಲ ಗ್ರಾಮದ ಟಿ. ಸತೀಶ್ ಜವರೇಗೌಡ ಅವರಿಗೆ ಕರ್ನಾಟಕ ರಾಜ್ಯ ಒಕ್ಕಲಿಗರ ವಿಕಾಸ ವೇದಿಕೆಯ ವತಿಯಿಂದ ಕೊಡಮಾಡುವ ಪ್ರಸಕ್ತ ಸಾಲಿನ ‘ಟಿ.ಎನ್. ದಾಸೇಗೌಡ ಸೇವಾಭೂಷಣ ಪ್ರಶಸ್ತಿ’ ದೊರೆತಿದೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾಗಿ ಮಂಡ್ಯ ಮತ್ತು ಮೈಸೂರು ಜಿಲ್ಲೆಗಳಲ್ಲಿ ಕರ್ತವ್ಯ ನಿರ್ಹಹಿಸಿದ್ದ ಟಿ.ಎನ್. ದಾಸೇಗೌಡರು ನಿವೃತ್ತರಾದ ಬಳಿಕ ಸಾಂಸ್ಕೃತಿಕ ಮತ್ತು ಸಾಹಿತ್ಯದ ಸಂಘಟನೆಗಳಲ್ಲಿ ತೊಡಗಿಸಿಕೊಂಡು ಸಮಾಜ ಸೇವೆಯಲ್ಲಿ ಸಕ್ರಿಯವಾಗಿದ್ದರು. ಅವರು ಅಕಾಲಿಕ ಮರಣಕ್ಕೆ ತುತ್ತಾದ ಬಳಿಕ ವಿಕಾಸ ವೇದಿಕೆಯು ಅವರ ಸ್ಮರಣಾರ್ಥ ಈ ‘ಸೇವಾಭೂಷಣ ಪ್ರಶಸ್ತಿ’ಯನ್ನು ಪ್ರತಿವರ್ಷ ನೀಡಲಾಗುತ್ತಿದ್ದು, ಈ ಸಾಲಿನ ಪ್ರಶಸ್ತಿಗೆ ಕವಿ ಮತ್ತು ಸಂಘಟಕ ಟಿ. ಸತೀಶ್ ಜವರೇಗೌಡ ಅವರು ಆಯ್ಕೆಯಾಗಿದ್ದಾರೆ.
ಮೈಸೂರಿನ ಕಲಾಮಂದಿರದ ಆವರಣದಲ್ಲಿರುವ ಕಿರುರಂಂದಿರದಲ್ಲಿ ನ. ೩೦ ರಂದು ಮಧ್ಯಾಹ್ನ ೩ ಗಂಟೆಗೆ ರಾಜ್ಯ ಸರ್ಕಾರಿ ನೌಕರರ ಸಂಘದ ನಿಕಟಪೂರ್ವ ಅಧ್ಯಕ್ಷ ಹೆಚ್.ಕೆ. ರಾಮು ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕನ್ನಡ ಹಬ್ಬದಲ್ಲಿ ಮಾಜಿ ಶಾಸಕ ಎಲ್. ನಾಗೇಂದ್ರ ಹಾಗೂ ಗೋಪಾಲಗೌಡ ಶಾಂತವೇರಿ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಡಾ. ಶುಶ್ರೂತ್ ಗೌಡ ಅವರು ಕವಿ ಸತೀಶ್ ಜವರೇಗೌಡ ಅವರಿಗೆ ಪ್ರಶಸ್ತಿ ಪ್ತದಾನ ಮಾಡುವರು ಎಂದು ವೇದಿಕೆಯ ರಾಜ್ಯಾಧ್ಯಕ್ಷೆ ಹೆಚ್.ಎಲ್. ಯಮುನಾ ತಿಳಿಸಿದ್ದಾರೆ.