Saturday, October 19, 2024

ಪ್ರಾಯೋಗಿಕ ಆವೃತ್ತಿ

ಪಾಂಡವಪುರ| ಶಂಭೂನಹಳ್ಳಿಯಲ್ಲಿ ಗುಂಡಿನ ಸದ್ದು; ನಾಡ ಪಿಸ್ತೂಲಿನಿಂದ ವ್ಯಕ್ತಿಯ ಕೊಲೆಗೆ ಯತ್ನ

ಪಾಂಡವಪುರ ತಾಲ್ಲೂಕಿನ ಶಂಭೂನಹಳ್ಳಿ ಗ್ರಾಮದಲ್ಲಿ ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬ ಮತ್ತೋರ್ವನ ಮೇಲೆ ನಾಡ ಪಿಸ್ತೂಲಿನಿಂದ ಶೂಟೌಟ್ ಮಾಡಿ ಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.

ಗ್ರಾಮದ ಶಿವರಾಜು ಎಂಬಾತ ಅದೇ ಗ್ರಾಮದ ಮಂಜುನಾಥ್ ಎಂಬಾತನ ಮೇಲೆ ಶೂಟೌಟ್ ನಡೆಸಿದ್ದು, ಗುಂಡಿನ ದಾಳಿಗೊಳಗಾದ ಮಂಜುನಾಥ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.

ಮುಂಬೈನ  ಹೋಟೆಲ್ ಒಂದರಲ್ಲಿ ಕೆಲಸ ಮಾಡುತ್ತಿದ್ದ ಶಿವರಾಜ್ ಎರಡು ನಾಡ ಪಿಸ್ತೂಲಿನಿಂದ  ಮಂಜುನಾಥ್ ಹಾಗೂ ಆತನ ಭಾವನ ಮೇಲೆ ಏಕಾಏಕಿ ಗುಂಡು ಹಾರಿಸಿದ್ದಾನೆ. ಈ ಸಂದರ್ಭದಲ್ಲಿ ಮಂಜುನಾಥ್ ಗೆ ತಲೆ ಹಾಗೂ ಕಂಕುಳ ಬಳಿ ಗಾಯವಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದೇ ಆರೋಪಿ ಶಿವರಾಜ್ ಕಳೆದ ಎರಡು ವರ್ಷಗಳ ಹಿಂದೆ ಕೂಡ ಮಂಜುನಾಥ್ ಮೇಲೆ ಹತ್ಯೆಗೆ ಯತ್ನಿಸಿ ಚಾಕುವಿನಿಂದ ಇರಿದಿದ್ದ ಎನ್ನಲಾಗಿದೆ.

ಪಾಂಡವಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!