Thursday, September 19, 2024

ಪ್ರಾಯೋಗಿಕ ಆವೃತ್ತಿ

ವಿದ್ಯಾರ್ಥಿಗಳು ಉನ್ನತ ಹುದ್ದೆಗೆ ಪ್ರಯತ್ನಿಸಬೇಕು- ಶೇಖ್ ತನ್ವೀರ್ ಆಸಿಫ್

ವಿದ್ಯಾರ್ಥಿಗಳು ಶಾಲೆಯಲ್ಲಿ ತಮಗೆ ದೊರಕುವ ಸಂಪನ್ಮೂಲಗಳನ್ನು ಉತ್ತಮ ರೀತಿಯಲ್ಲಿ  ಉಪಯೋಗಿಸಿ ಕೊಂಡು. ಶೈಕ್ಷಣಿಕವಾಗಿ ಸಾಧನೆ ಮಾಡಿ, ಸಮಾಜದಲ್ಲಿ ಉನ್ನತ ಹುದ್ದೆಗಳನ್ನು ಹೊಂದುವ ದಾರಿಯಲ್ಲಿ ಪ್ರಯತ್ನ ಮಾಡಬೇಕು ಎಂದು ಮಂಡ್ಯ ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್  ತಿಳಿಸಿದರು.

ಮಂಡ್ಯ ತಾಲ್ಲೂಕಿನ ಗ್ರಾಮ ಪಂಚಾಯಿತಿ ಉಮ್ಮಡಹಳ್ಳಿ ಮತ್ತು ಸರ್ಕಾರಿ ಪ್ರೌಢಶಾಲೆ ಉಮ್ಮಡಹಳ್ಳಿ ಇವರ ಸಂಯುಕ್ತ ಆಶ್ರಯದಲ್ಲಿ ಇತ್ತೀಚೆಗೆ 2023-24ನೇ ಸಾಲಿನ ಮಹಿಳಾ ಮತ್ತು ಮಕ್ಕಳ ಗ್ರಾಮಸಭೆ, ಮಕ್ಕಳ ಸಂತೆ, ಮೆಟ್ರಿಕ್ ಮೇಳ ಮತ್ತು ವಿಜ್ಞಾನ ವಸ್ತು ಪ್ರದರ್ಶನ ಕಾರ್ಯಕ್ರಮವನ್ನು ಸರ್ಕಾರಿ ಪ್ರೌಢ ಶಾಲೆ -ಉಮ್ಮಡಹಳ್ಳಿಯ ಶಾಲಾವರಣದಲ್ಲಿ ಉದ್ಘಾಟಿಸಿ ಮಾತನಾಡಿದರು.

ಈ ಕಾರ್ಯಕ್ರಮ ವಿನೂತನವಾಗಿದ್ದು, ಖಾಸಗಿ ಶಾಲೆಗಳಿಗೆ ಸೀಮಿತವಾಗಿದ್ದು, ಇದನ್ನು ಸರ್ಕಾರಿ ಶಾಲೆಯಲ್ಲಿ ಏರ್ಪಡಿಸಿರುವುದು ಮೆಚ್ಚುವಂತದ್ದು. ಜೊತೆಗೆ ಖಾಸಗಿ ಶಾಲೆ ಯಾವುದರಲ್ಲು ಕಡಿಮೆ ಇಲ್ಲ ಮತ್ತು ಈ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಎಲ್ಲಾ ವಿದ್ಯಾರ್ಥಿಗಳು ತುಂಬಾ ಅದೃಷ್ಟವಂತರು ಈ ಶಾಲೆಯ ಸೌಲಭ್ಯಗಳ ಬಳಸಿಕೊಂಡು ನನಗಿಂತ ಉನ್ನತ ಸ್ಥಾನವನ್ನು ವಿದ್ಯಾರ್ಥಿಗಳು ಮುಟ್ಟಬೇಕು ಎಂದರು.

ಉಮ್ಮಡಹಳ್ಳಿ ಗ್ರಾಮ ಪಂಚಾಯಿತಿಯ ವ್ಯಾಪ್ತಿಗೆ ಬರುವ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ತಮ್ಮ ಸಾಮಾಗ್ರಿಗಳೊಂದಿಗೆ ಸಂತೆಯಲ್ಲಿ ವ್ಯಾಪಾರ- ವಹಿವಾಟು ನಡೆಸಿದರು

ಸಿಇಒ ಶೇಕ್ ತನ್ವಿರ್ ಆಸಿಫ್ ಅವರು, ಮುಕ್ಕಳನ್ನು ಮಾತನಾಡಿಸಿ ಅವರು ಸಿದ್ಧಪಡಿಸಿಕೊಂಡು ಬಂದಿದ್ದ ತಿಂಡಿ ತಿನಿಸುಗಳನ್ನು ಸವಿದು ಮೆಚ್ಚುಗೆಯನ್ನು ವ್ಯಕ್ತಪಡಿಸಿದರು. ಇದರೊಂದಿಗೆ ‘ವಿಜ್ಞಾನ ಕಾರ್ನರ್’ ನಲ್ಲಿದ್ದ ವಿವಿಧ ವಿಜ್ಞಾನದ ಮಾದರಿಗಳನ್ನು ವೀಕ್ಷಿಸಿ ಅದರ ಕುರಿತು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.

ವಿವಿಧ ಬಗೆಯ ಜೀವಿಗಳ ಸಂರಕ್ಷಿತ ಮಾದರಿಗಳು, ಸೌರವ್ಯೂಹ, ಹೂವಿನರಚನೆ, ಸೂಕ್ಷ್ಮದರ್ಶಕ ವೀಕ್ಷಣೆ, ಜೈವಿಕ ಅನಿಲ ತಯಾರಿ ಘಟಕ, ಸೌರಕುಕ್ಕರ್, ಸೌರಜಲ ತಾಪಕ ಮುಂತಾದ ಮಾದರಿಗಳೊಂದಿಗೆ – ಮಧುಮೇಹ ಪತ್ತೆ ಹಚ್ಚಲು ಹಾಗೂ ರಕ್ತದ ಗುಂಪು ಕಂಡುಹಿಡಿಯುವ ಚಟುವಟಿಕೆ – ಪ್ರಯೋಗಗಳನ್ನು ವೀಕ್ಷಿಸಿದರು. ತದನಂತರದಲ್ಲಿ ಗ್ರಾಮಸ್ಥರಿಗೆ ಇ-ಸ್ವತ್ತು ಹಕ್ಕು ಪತ್ರ ವಿತರಣೆ ನಡೆಯಿತು. ನಂತರ

ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಶಿವರಾಮೇಗೌಡ ಮಾತನಾಡಿ, ಕಾರ್ಯಕ್ರಮದ ಉದ್ದೇಶವು ವಿದ್ಯಾರ್ಥಿಗಳಲ್ಲಿ ವ್ಯವಹಾರ ಕೌಶಲವನ್ನು ಉತ್ತಮಪಡಿಸಲು ಸಹಕಾರಿಯಾಗಿದೆ ಮತ್ತು ಶಾಲೆಯಲ್ಲಿ ಎಲ್ಲಾ ರೀತಿಯ ಸೌಲಭ್ಯಗಳೂ ವಿದ್ಯಾರ್ಥಿಗಳ ಉತ್ತಮ ಕಲಿಕೆಗೆ ಪೂರಕವಾಗಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಕಿವಿಮಾತು ಹೇಳಿದರು.

ಇದೇ ಸಂದರ್ಭದಲ್ಲಿ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಎಂ.ಎಸ್.ವೀಣಾ, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಮಹದೇವು, ಗ್ರಾಮ ಅಭಿವೃದ್ಧಿ ಅಧಿಕಾರಿ  ಮಂಜುನಾಥ್, ಗ್ರಾಮ ಪಂಚಾಯಿತಿಯ ಅಧ್ಯಕ್ಷರು ಮತ್ತು ಸದಸ್ಯರು, ಶಾಲಾ ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರಾದ  ರಮ್ಯ, ಶಾಲೆಯ ಮುಖ್ಯ ಶಿಕ್ಷಕ ನಾಗರಾಜು ಹಾಗೂ ಶಾಲಾ ಸಿಬ್ಬಂದಿ ವರ್ಗ ಹಾಗೂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಿಧ ಇಲಾಖೆಯ ಸಿಬ್ಬಂದಿ ಉಪಸ್ಥಿತರಿದ್ದರು

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!