ಮದ್ದೂರು ತಾಲ್ಲೂಕು ಯಲಾದಹಳ್ಳಿ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಬಿ.ಶಿವಣ್ಣ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘಕ್ಕೆ ನಡೆದ ಚುನಾವಣೆಯಲ್ಲಿ ದೊಡ್ಡ ಬೋರೇಗೌಡರ ಮಗ ಬಿ.ಶಿವಣ್ಣ ಅಧ್ಯಕ್ಷರಾಗಿ, ಯಲಾದಹಳ್ಳಿ ಗ್ರಾಮದ ಲಕ್ಷ್ಮಿ ಕೆಂಪಶೆಟ್ಟಿ ಉಪಾಧ್ಯಕ್ಷರಾಗಿ ಆಯ್ಕೆಗೊಂಡ ಹಿನ್ನೆಲೆಯಲ್ಲಿ ಗ್ರಾಮದ ಮುಖಂಡರು ಸಂಘದ ಸದಸ್ಯರು ಅಭಿನಂದಿಸಿ ಗೌರವಿಸಿದ್ದಾರೆ.
ನೂತನ ಅಧ್ಯಕ್ಷ ಬಿ.ಶಿವಣ್ಣ ಅವರು ಸಹಕಾರದಿಂದ ಸಿಗುವ ಸೌಲಭ್ಯಗಳನ್ನು ಸಮಪರ್ಕವಾಗಿ ಒದಗಿಸುವುದಾಗಿ ತಿಳಿಸಿದ್ದಾರೆ.