ಬಿಜೆಪಿ-ಜೆಡಿಎಸ್ ಮುಖಂಡರು ಒಪ್ಪಿದರೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ ತಿಳಿಸಿದರು.
ನಾಗಮಂಗಲ ಪಟ್ಟಣದ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮುಂಬರುವ ಲೋಕಸಭಾ ಚುನಾವಣೆಗೆ ಎರಡೂ ಪಕ್ಷಗಳು ಒಪ್ಪಿದರೆ ಸ್ಪರ್ಧಿಸುವುದಾಗಿ ತಮ್ಮ ಮನದಾಳದ ಇಂಗಿತ ವ್ಯಕ್ತಪಡಿಸಿದರು.
ಜೆಡಿಎಸ್ ಮತ್ತು ಬಿಜೆಪಿ ಮೈತ್ರಿಗೆ ನನ್ನ ಸಹಮತವಿದೆ. ಸಂಸದರ ಚುನಾವಣೆಗೆ ಮಾತ್ರ ಮೈತ್ರಿ ಇರಬಾರದು. ತಳ ಮಟ್ಟದ ಚುನಾವಣೆಗೂ ಕೂಡ ಮೈತ್ರಿ ಮಾಡಿಕೊಳ್ಳಬೇಕು. ಈಗಾಗಲೇ ಆರು ತಿಂಗಳ ಮಟ್ಟಿಗೆ ಸಂಸದನಾಗಿ, ಸಾಲಗಾರ ಕೂಡ ಆಗಿದ್ದೇನೆ. ಎಚ್.ಡಿ. ಕುಮಾರಸ್ವಾಮಿ ರವರು ಮನಸ್ಸು ಮಾಡಿದರೆ ನಾನು ಹಿರಿಯನಾಗಿದ್ದು, ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತೇನೆ ಎಂದರು.
ನಿಖಿಲ್ ಕುಮಾರಸ್ವಾಮಿ ಅವರು ಎರಡು ಪಕ್ಷದ ಒಮ್ಮತದ ಅಭ್ಯರ್ಥಿಯಾಗಿ ಚುನಾವಣೆಗೆ ನಿಂತರೆ ನನ್ನದು ಯಾವುದೇ ತಕರಾರಿಲ್ಲ ಎಂದು ತಿಳಿಸಿದರು
ಪತ್ರಿಕಾ ಗೋಷ್ಠಿಯಲ್ಲಿ ಅಹಿಂದ ಮುಖಂಡ ಮಂಜೇಗೌಡ,ತಾಲೂಕು ಬಿಜೆಪಿ ಅಧ್ಯಕ್ಷ ಸೋಮಶೇಖರ್, ಪಾಳ್ಯ ರಾಘು ಹಾಗೂ ಹಲವು ಮುಖಂಡರು ಭಾಗವಹಿಸಿದ್ದರು.