Thursday, September 19, 2024

ಪ್ರಾಯೋಗಿಕ ಆವೃತ್ತಿ

ಚಿನ್ನದನಾಡು ಕೋಲಾರದಿಂದ ಸ್ಪರ್ಧೆ : ಸಿದ್ದರಾಮಯ್ಯ ಘೋಷಣೆ

ಮುಂಬರುವ ವಿಧಾನಸಭಾ ಚುನಾವಣೆಗೆ ಚಿನ್ನದನಾಡು ಕೋಲಾರದಿಂದಲೇ ಸ್ಪರ್ಧಿಸುವುದಾಗಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

ಕಳೆದ ಚುನಾವಣೆಯಲ್ಲಿ ಬಾಗಲಕೋಟೆ ಜಿಲ್ಲೆಯ ಬಾದಾಮಿಯಿಂದ ಗೆದ್ದು ಬಂದಿದ್ದ ಸಿದ್ದರಾಮಯ್ಯ, ಈ ಬಾರಿ ತಮ್ಮ ರಾಜಕೀಯದ ಕರ್ಮಭೂಮಿಯನ್ನಾಗಿ ಚಿನ್ನದನಾಡನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಓಡಾಟದ ದೃಷ್ಠಿಯಿಂದ ದೂರವಾದ ಕಾರಣಕ್ಕೆ ಕೋಲಾರವನ್ನು ಆಯ್ಕೆ ಮಾಡಿಕೊಂಡಿದ್ದಾರೆಂದು ಅವರ ಆಪ್ತವಲಯದ ಮುಖಂಡರು ತಿಳಿಸಿದ್ದಾರೆ.

ಸೋಮವಾರ ಸ್ಥಳೀಯ ಕಾಂಗ್ರೆಸ್ ನಾಯಕ ಕೆ.ಎಚ್.ಮುನಿಯಪ್ಪ ಅವರ ನಿವಾಸಕ್ಕೆ ತೆರಳಿದ ಸಿದ್ದರಾಮಯ್ಯ ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಿ, ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡಿದ್ದರು. ಈ ಹಿಂದೆ ಸಮಾರಂಭವೊಂದರಲ್ಲಿ ಭಾಗವಹಿಸಿದ್ದ ಸಿದ್ದರಾಮಯ್ಯ ಅವರು ‘ಮುಂದೆ ನಾಮಪತ್ರ ಸಲ್ಲಿಸಲಿ ಬರುತ್ತೇನೆ’ ಎಂದು ಸೂಚನೆ ನೀಡಿದ್ದರು. ಆದರಂತೆ ಅವರು ಕೋಲಾರವನ್ನೆ ರಾಜಕೀಯ ಅಖಾಡವನ್ನಾಗಿ ಆಯ್ಕೆ ಮಾಡಿಕೊಂಡಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!