Thursday, September 19, 2024

ಪ್ರಾಯೋಗಿಕ ಆವೃತ್ತಿ

ಪಕ್ಷ ಸಂಘಟಿಸಲು ಕಾರ್ಯಕರ್ತರು ಮುಂದಾಗಬೇಕು : ಯಮದೂರು ಸಿದ್ದರಾಜು

ಪ್ರಧಾನಿ ಮೋದಿ ಅವರನ್ನು ಬೆಂಬಲಿಸಿ ಯುವ ಸಮೂಹ ಬಿಜೆಪಿಯತ್ತ ಮುಖ ಮಾಡಿದ್ದು, ರಾಜ್ಯದಲ್ಲಿ ಬಿಜೆಪಿ ಪಕ್ಷ ಅಧಿಕಾರ ಹಿಡಿಯಲು ಪಕ್ಷವನ್ನು ಸಂಘಟಿಸಲು ಕಾರ್ಯಕರ್ತರು ಮುಂದಾಗಬೇಕೆಂದು ಬಿಜೆಪಿ ಜಿಲ್ಲಾ ರೈತ ಮೋರ್ಚಾ ಉಪಾಧ್ಯಕ್ಷ ಯಮದೂರು ಸಿದ್ದರಾಜು ತಿಳಿಸಿದರು.

ಮಳವಳ್ಳಿ ತಾಲ್ಲೂಕಿನ ದೊಡ್ಡಬೂವಳ್ಳಿ ಮಹಾ ಶಕ್ತಿಕೇಂದ್ರ ವ್ಯಾಪ್ತಿಯ ರಾಗಿಬೊಮ್ಮನಹಳ್ಳಿ ಮಹದೇಶ್ವರ ದೇವಸ್ಥಾನದ ಆವರಣದಲ್ಲಿ ನಡೆದ ವಿಜಯ ಸಂಕಲ್ಪ ಅಭಿಯಾನ ಕಾಯ೯ಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ದೇಶದ ಅಭಿವೃದ್ಧಿಗೆ ನಿರಂತರವಾಗಿ ಶ್ರಮಿಸುತ್ತಿರುವ ಬಿಜೆಪಿ ಪಕ್ಷವನ್ನು ಮತದಾರ ಬೆಂಬಲಿಸಬೇಕೆಂದರ.

ಮಾಜಿ ಸಚಿವ ಬಿ.ಸೋಮಶೇಖರ್ ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಲವು ಜನಪರ ಕಾರ್ಯಕ್ರಮಗಳನ್ನು ನೀಡಿದ್ದು, ಅನುಷ್ಢಾನಗೊಂಡ ಯೋಜನೆಗಳನ್ನು ಮನೆ ಬಾಗಿಲಿಗೆ ತಿಳಿಸುವ ಉದ್ದೇಶದಿಂದ ವಿಜಯ ಸಂಕಲ್ಪ ಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ವಿಜಯ ಸಂಕಲ್ಪ ಅಭಿಯಾನ ಸಂಚಾಲಕ ಜಿ.ಮುನಿರಾಜು ಮಾತನಾಡಿ, ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷವನ್ನು ಹೆಚ್ಚು ಸ್ಥಾನಗಳನ್ನು ಗೆಲ್ಲಿಸುವುದರ ಮೂಲಕ ಬಿಜೆಪಿ ಪಕ್ಷ ಅಧಿಕಾರ ಹಿಡಿಯುವಂತೆ ಮಾಡಲು ಬಿಜೆಪಿ ಕಾರ್ಯಕರ್ಯರು ಬಿಜೆಪಿ ಕರಪತ್ರವನ್ನು ಮನೆ ಬಾಗಿಲಿಗೆ ತಲುಪಿಸಿ ಬಿಜೆಪಿ ಭರವಸೆಯ ಸ್ಟಿಕ್ಕರ್ ಅಂಟಿಸುವ ಮೂಲಕ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯನ್ನು ಯಶಸ್ವಿಗೊಳಸಬೇಕೆಂದು ಕೋರಿದರು.

ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಮಧು ಗಂಗಾಧರ್, ಮಂಡಲ ಅಧ್ಯಕ್ಷ ಎಂ.ಎನ್.ಕೃಷ್ಣ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೆಬ್ಬಣಿ ಬಸವರಾಜು, ತಾಲ್ಲೂಕು ಮಂಡಲ ಪ್ರಧಾನ ಕಾರ್ಯದರ್ಶಿ ಕೆ.ಸಿ.ನಾಗೇಗೌಡ, ಯುವ ಘಟಕದ ಅಧ್ಯಕ್ಷ ಮೋಹನ್, ಶಕ್ತಿ ಕೇಂದ್ರ ಅಧ್ಯಕ್ಷ ರಮೇಶ್, ಮುಖಂಡರಾದ ದೋರನಹಳ್ಳಿ ಕುಮಾರಸ್ವಾಮಿ, ಲೀಲಾವತಿ, ಮರಿಸ್ವಾಮಿ ಸೇರಿದಂತೆ ಇತರರು ಇದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!