Thursday, September 19, 2024

ಪ್ರಾಯೋಗಿಕ ಆವೃತ್ತಿ

ಸಾಮಾಜಿಕ ಸೇವಾ ರತ್ನ ಪ್ರಶಸ್ತಿಗೆ ಎಂ.ಸಿ.ಲಂಕೇಶ್ ಆಯ್ಕೆ

ಬೆಂಗಳೂರಿನ ದಶಮುಖ ಸಾಮಾಜಿಕ ಸೇವಾ ಟ್ರಸ್ಟ್ 67 ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ನೀಡುವ ”ದಶಮುಖ ಸಾಮಾಜಿಕ ಸೇವಾ ರತ್ನ” ಪ್ರಶಸ್ತಿಗೆ ರಾಜ್ಯ ಯುವ ಪ್ರಶಸ್ತಿ ಪುರಸ್ಕೃತ ಎಂ.ಸಿ.ಲಂಕೇಶ್ ಮಂಗಲ  ಆಯ್ಕೆ ಆಗಿದ್ದಾರೆ.

ಬೆಂಗಳೂರಿನ ಬಿಳೇಕನಹಳ್ಳಿಯ ವಿಜಯ ಬ್ಯಾಂಕ್ ಲೇಔಟ್ ನ ಸುಂದರಾಮ್ ಶೆಟ್ಟಿ ಹಾಲ್ ನ.26ರಂದು ಬೆಳಿಗ್ಗೆ 11 ಗಂಟೆಗೆ ನಡೆಯುವ ಸಮಾರಂಭದಲ್ಲಿ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಎಂ.ಸತೀಶ್ ರೆಡ್ಡಿ ಅವರು ಪ್ರಶಸ್ತಿ ಪ್ರದಾನ ಮಾಡುವರು.

ಲಂಕೇಶ್ ಅವರ ಸಮಾಜಸೇವಾ ಕಾರ್ಯವನ್ನು ಪರಿಗಣಿಸಿ ಅವರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ದಶಮುಖ ಪತ್ರಿಕೆ ಸಂಪಾದಕ ಕೆ.ಬೊಮ್ಮೇಗೌಡ ತಿಳಿಸಿದ್ದಾರೆ.

ಲಂಕೇಶ್ ಸಾಂಸ್ಕೃತಿಕ, ಸಾಮಾಜಿಕ ಸೇವೆಗಳಲ್ಲಿ ತೊಡಗಿಸಿಕೊಂಡಿರುವುದಲ್ಲದೇ ನೂರಾರು ರಕ್ತದಾನ ಶಿಬಿರ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸಂಘಟಿಸಿರುವುದಲ್ಲದೇ, ವೈಯಕ್ತಿಕವಾಗಿ 61 ಭಾರಿ ರಕ್ತದಾನ ಮಾಡಿ ನೊಂದವರಿಗೆ ನೆರವಾಗಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!