Monday, May 6, 2024

ಪ್ರಾಯೋಗಿಕ ಆವೃತ್ತಿ

ಮದ್ದೂರು| ಸೊಳ್ಳೆಪುರ ಡೇರಿ ಅಧ್ಯಕ್ಷರಾಗಿ ಪ್ರಕಾಶ್ ಗೌಡ ಆಯ್ಕೆ

ವರದಿ: ಪ್ರಭು ವಿ ಎಸ್

ಮದ್ದೂರು ತಾಲೂಕಿನ ಸೊಳ್ಳೆಪುರ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಕಾಂಗ್ರೆಸ್ ಬೆಂಬಲಿತರಾದ ಎಸ್.ಟಿ.ಪ್ರಕಾಶ್ ಗೌಡ ಅಧ್ಯಕ್ಷರಾಗಿ, ಶೋಭಾ ಸಿ.ರಾಮಣ್ಣ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದರು.

ಸಂಘದ ಕಚೇರಿಯಲ್ಲಿ ನಡೆದ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಇಬ್ಬರನ್ನು ಹೊರತುಪಡಿಸಿ ಬೇರೆ ಯಾರು ನಾಮ ಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ ಇವರ ಆಯ್ಕೆಯನ್ನು ಚುನಾವಣಾಧಿಕಾರಿ ಧರಣೇಂದ್ರ ಕುಮಾರ್ ಘೋಷಣೆ ಮಾಡಿದರು.

ನೂತನ ಅಧ್ಯಕ್ಷ ಎಸ್. ಟಿ ಪ್ರಕಾಶ್ ಗೌಡ ಮಾತನಾಡಿ, ನನ್ನನ್ನು ಅಧ್ಯಕ್ಷರನ್ನಾಗಿ ಆಯ್ಕೆಗೊಳಿಸಿದ ಸಂಘದ ನಿರ್ದೇಶಕರಿಗೆ ಮತ್ತು ಸ್ಥಳೀಯ ಗ್ರಾಮಸ್ಥರಿಗೆ ಅಭಿನಂದನೆ ಸಲ್ಲಿಸುತ್ತೇನೆ ಹಾಗೂ ಅಧಿಕಾರದ ಅವಧಿಯಲ್ಲಿ ಸಂಘದ ಶ್ರೇಯೋಭಿವೃದ್ಧಿಗೆ ಶಕ್ತಿಮೀರಿ ಶ್ರಮಿಸುವುದಾಗಿ ಹೇಳಿದರು.

ಸಚಿವ ಎನ್. ಚಲುವರಾಯಸ್ವಾಮಿ ಮತ್ತು ಶಾಸಕ ಕೆ .ಎಂ ಉದಯ್ ಅವರ ಮಾರ್ಗದರ್ಶನದಲ್ಲಿ ಸಹಕಾರ ಸಂಘದ ಅಭಿವೃದ್ಧಿ ಜತೆಗೆ ಹಾಲು ಉತ್ಪಾದಕರಿಗೆ ಒಕ್ಕೂಟದಿಂದ ಸಿಗುವ ಹಲವು ಯೋಜನೆಗಳನ್ನು ತಲುಪಿಸಲು ಪ್ರಾಮಾಣಿಕವಾಗಿ ತಲುಪಿಸುವುದಾಗಿ ತಿಳಿಸಿದರು.

ನಾನು ಒಕ್ಕೂಟದ ನಿರ್ದೇಶಕ ಸ್ಥಾನದ ಆಕಾಂಕ್ಷಿಯಾಗಿದ್ದು ತಾಲೂಕಿನ ಸಹಕಾರ ಸಂಘದ ಬಂಧುಗಳು ತಮ್ಮನ್ನು ಆಶೀರ್ವದಿಸಿ ನಿರ್ದೇಶಕರನ್ನಾಗಿ ಆಯ್ಕೆಗೊಳಿಸುವ ಮೂಲಕ ತಮ್ಮಗಳ ಸೇವೆ ಮಾಡಲು ಅವಕಾಶ ಕಲ್ಪಿಸಬೇಕೆಂದು ಮನವಿ ಮಾಡಿದರು.

ಸಂಘದ ನಿರ್ದೇಶಕರಾದ ಪುಟ್ಟಸ್ವಾಮಿ, ಎಸ್. ದಯಾನಂದ, ಕೃಷ್ಣ, ಶಶಿಕುಮಾರ್, ವೆಂಕಟೇಶ್, ಶಿವರಾಮ, ಎಸ್ ಕೆ ದಿವ್ಯ, ನಾರಾಯಣ್ , ಮುಖಂಡರಾದ ಬಿ.ಶಂಕರೇಗೌಡ, ಪುಟ್ಟರಾಜು, ಎಸ್.ಸಿ. ರಮೇಶ್ , ಎಸ್. ಟಿ. ವೆಂಕಟೇಶ್, ರಾಮಚಂದ್ರ, ಎಸ್. ಟಿ .ಗುರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!