Saturday, May 18, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಸೋನಿಯಾ ಗಾಂಧಿ ಹುಟ್ಟುಹಬ್ಬ ಆಚರಣೆ

ಮಂಡ್ಯ ನಗರದ ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಸೋನಿಯಾ ಗಾಂಧಿ ಹುಟ್ಟು ಹಬ್ಬದ ಕಾರ್ಯಕ್ರಮದಲ್ಲಿ ಕಾರ್ಯಕರ್ತರು ಮತ್ತು ಮುಖಂಡರು ಸಿಹಿ ವಿತರಿಸಿ ಹುಟ್ಟುಹಬ್ಬ ಆಚರಣೆ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್‌ ಮಹಿಳಾ ಘಟಕದ ಅಧ್ಯಕ್ಷೆ ಅಂಜನಾ ಶ್ರೀಕಾಂತ್, ಇಟಲಿಯ ಸಂಸ್ಕೃತಿಯಿಂದ ಹೊರಬಂದು ನಮ್ಮ ಭಾರತ ಸಂಸ್ಕೃತಿಗೆ ಒಗ್ಗಿಕೊಂಡ ಸೋನಿಯಾ ಗಾಂಧಿ ನಡೆ ಮೆಚ್ಚುವಂತದ್ದು ಎಂದು ಶ್ಲಾಘಿಸಿದರು.

ಇಟಲಿಯಿಂದ ಸೊಸೆಯಾಗಿ ಬಂದ ಸೋನಿಯಾ ಗಾಂಧಿ ಅವರು, ರಾಜೀವ್‌ ಗಾಂಧಿಯವರು ಮರಣ ಹೊಂದಿದ ಮೇಲೂ ಕಾಂಗ್ರೆಸ್‌ ಪಕ್ಷವನ್ನು ಮುನ್ನಡೆಸಿ ಯಶಸ್ವಿಯಾದರು ಎಂದು ಸ್ಮರಿಸಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಸಿ.ಡಿ.ಗಂಗಾಧರ, ವಕ್ತಾರ ಸಿ.ಎಂ.ದ್ಯಾವಪ್ಪ, ಮುಖಂಡರಾದ ವೀಣಾ ಶಂಕರ್, ಪೂರ್ಣಿಮಾ, ಗೀತಾ, ಶೋಭಾ ಗಂಗಾಧರ್, ಪದ್ಮಾ, ಸಂಪಹಳ್ಳಿ ದೇವರಾಜು, ಕನ್ನಲಿ ಚನ್ನಪ್ಪ ಸೇರಿದಂತೆ ಕಾರ್ಯಕರ್ತರು ಮತ್ತು ಮುಖಂಡರು ಭಾಗವಹಿಸಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!