Saturday, October 19, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಅ.17ಕ್ಕೆ ಕಾವೇರಿ ಪ್ರತಿಮೆಗೆ ವಿಶೇಷಪೂಜೆ ; ಅನ್ನ ಸಂತರ್ಪಣೆ

ಕಾವೇರಿಯ ನದಿಯ ಉಗಮ ಸ್ಥಾನ ತಲಕಾವೇರಿಯಲ್ಲಿ ಅಕ್ಟೋಬರ್ 17ರಂದು ಪವಿತ್ರ ತೀರ್ಥೋದ್ಭವ ನಡೆಯುವ ಹಿನ್ನಲೆಯಲ್ಲಿ ಮಂಡ್ಯ ನಗರದ ಕಾವೇರಿವನ ಉದ್ಯಾನದಲ್ಲಿನ ಕಾವೇರಿ ಪ್ರತಿಮೆಗೆ ವಿಶೇಷ ಪೂಜೆ ಹಮ್ಮಿಕೊಳ್ಳಲಾಗಿದೆ ಎಂದು ನಾಲ್ವಡಿ ಕೃಷ್ಣರಾಜ ಒಡೆಯರ್ ಟ್ರಸ್ಟ್‌ನ ಅಧ್ಯಕ್ಷ ತಗ್ಗಹಳ್ಳಿ ವೆಂಕಟೇಶ್ ತಿಳಿಸಿದರು.

ಮಂಡ್ಯದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ಪಿ.ರವಿಕುಮಾರ್‌ಗೌಡ ವಹಿಸಲಿದ್ದು, ಶ್ರೀರಂಗಪಟ್ಟಣ ಶಾಸಕ ಎ.ಬಿ.ರಮೇಶ್‌ಬಂಡಿಸಿದ್ದೇಗೌಡ ಸಮಾರಂಭ ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಮೈಷುಗರ್ ಅಧ್ಯಕ್ಷ ಸಿ.ಡಿ.ಗಂಗಾಧರ್, ನಗರಸಭಾ ಅಧ್ಯಕ್ಷ ಪ್ರಕಾಶ್.ಎಂ.ವಿ., ಮುಡಾ ಅಧ್ಯಕ್ಷ ನಹೀಮ್, ನಗರಸಭೆ ಉಪಾಧ್ಯಕ್ಷ ಅರುಣ್‌ಕುಮಾರ್, ಟ್ರಸ್ಟ್‌ನ ಪ್ರಧಾನ ಪೋಷಕ ಎಚ್.ಎನ್.ಯೋಗೇಶ್, ಜಿಲ್ಲಾಧಿಕಾರಿ ಡಾ.ಕುಮಾರ, ಜಿ.ಪಂ ಸಿಇಓ ಶೇಖ್ ತನ್ವೀರ್ ಆಸಿಫ್, ಎಡಿಸಿ ಎಚ್.ಎಲ್.ನಾಗರಾಜು, ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಎಎಸ್ಪಿ ಗಂಗಾಧರಸ್ವಾಮಿ, ಕಾ.ನೀ.ನಿಗಮದ ಕಾರ್ಯಪಾಲಕ ಅಭಿಯಂತರ ನಂಜುಂಡೇಗೌಡ, ತೋಟಗಾರಿಕೆ ಉಪನಿರ್ದೇಶಕಿ ರೂಪಶ್ರೀ ಭಾಗವಹಿಸಲಿದ್ದಾರೆ ಎಂದು ವಿವರಿಸಿದರು.

ಕಾವೇರಿ ಪ್ರತಿಮೆಗೆ ವಿಶೇಷ ಪೂಜೆ ಕಾರ್ಯಕ್ರಮಸ ನಂತರ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಅನ್ನಸಂತರ್ಪಣೆಯನ್ನು ಹಮ್ಮಿಕೊಳ್ಳಲಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸುವಂತೆ ಮನವಿ ಮಾಡಿದರು.

ಗೋಷ್ಠಿಯಲ್ಲಿ ಜಗದೀಶ್, ಚಂದ್ರಶೇಖರ್, ಟಿ.ಡಿ.ನಾಗರಾಜು, ದೇವೇಗೌಡ, ಕುಮಾರ್‌ಗೌಡ, ಅರ್ಜುನ್ ಇದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!