Wednesday, September 18, 2024

ಪ್ರಾಯೋಗಿಕ ಆವೃತ್ತಿ

ಕ್ರೀಡೆಯಲ್ಲಿ ಪಾಲ್ಗೊಳ್ಳುವಿಕೆ ಅವಶ್ಯ: ಡಾ.ತಮ್ಮಣ್ಣ

ವೈದ್ಯಕೀಯ ವಿದ್ಯಾರ್ಥಿಗಳು ಓದಿನ ಜೊತೆಗೆ ಕ್ರೀಡೆಗಳಲ್ಲಿ ಪಾಲ್ಗೊಳ್ಳುವುದು ಅವಶ್ಯ ಎಂದು ಮಿಮ್ಸ್ ಪ್ರಾಂಶುಪಾಲ ಡಾ.ತಮ್ಮಣ್ಣ ಹೇಳಿದರು.

ಮಂಡ್ಯ ನಗರದ ಮಿಮ್ಸ್ ಜಿಲ್ಲಾಸ್ಪತ್ರೆಯ ಕ್ರೀಡಾಂಗಣದಲ್ಲಿ ನಡೆದ ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಅವ್ಯುಕ್ತನ್ಸ್ ಅರ್ಪಿಸುವ ವಿರಾಟ-೨೦೨೨ರ ಅಥ್ಲೆಟಿಕ್ ಮೀಟ್ ಕ್ರೀಡಾ ಕೂಟ ಉದ್ಘಾಟಿಸಿ ಅವರು ಮಾತನಾಡಿದರು.

ಕಾಲೇಜು ಜೀವನದಲ್ಲಿ ಕ್ರೀಡೆ-ಸಾಂಸ್ಕೃತಿಕ ಚಟುವಟಿಕೆಗಳು ಇದ್ದೇ ಇರುತ್ತವೆ. ವೈದ್ಯ ವಿದ್ಯಾರ್ಥಿಗಳು ಓದಿನ ಜೊತೆಗೆ ಕ್ರೀಡೆಗಳಲ್ಲಿ ಪಾಲ್ಗೊಳ್ಳುವಿಕೆ ಅವಶ್ಯಕ,ಜೊತೆಗೆ ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸುವ ಮನೋಭಾವ ಮೈಗೂಡಿಸಿಕೊಳ್ಳಬೇಕಿದೆ ಎಂದು ಸಲಹೆ ನೀಡಿದರು.

ಕೋವಿಡ್ ಸಮಯದ ದಿನಗಳಲ್ಲಿ ಕ್ರೀಡೆಗಳು ಮತ್ತು ಸಾಂಸ್ಕೃತಿಕ ಚಟುವಟಿಗಳು ಒಂದೇ ಆಗಿಬಿಟ್ಟಿವೆ. ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಕ್ರೀಡೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರತ್ಯೇಕವಾಗಿ ಅಯೋಜನೆ ಮಾಡಲಾಗುವುದು ಎಂದರು.

ಇದೇ ಸಂದರ್ಭದಲ್ಲಿ ವಿವಿಧ ಅಥ್ಲೆಟಿಕ್ ಕ್ರೀಡೆಗಳಲ್ಲಿ ವಿಜೇತಾದವರಿಗೆ ಮತ್ತು ವಿಜೇತ ತಂಡಗಳಿಗೆ ಗಣ್ಯರು ಬಹುಮಾನ ನೀಡಲಾಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಶ್ರೀಧರ್, ಕೀಡಾ ಸಮಿತಿ ಸದಸ್ಯರಾದ ಡಾ.ಹರೀಶ್, ಡಾ.ಸಿದ್ದೇಗೌಡ, ಡಾ ನಾಗರಾಜೇಗೌಡ, ದೈಹಿಕ ಶಿಕ್ಷಣ ನಿರ್ದೇಶಕ ಡಾ.ಸುರೇಶ್, ಡಾ.ಅಶ್ವಿನ್, ಡಾ.ಅನೀನಾ, ಚೇತನಾ ಮತ್ತಿತರರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!