ಮದ್ದೂರು ತಾಲ್ಲೂಕು ಆತಗೂರು ಹೋಬಳಿಯ ಮಲ್ಲನಕುಪ್ಪೆ ಗ್ರಾಮದಲ್ಲಿ ಶ್ರೀ ದಂಡಿನಮಾರಮ್ಮ ದೇವರ ಪರಕ್ಕೆ ಬರುವ ಭಕ್ತಾದಿಗಳಿಗೆ ಸುಮಾರು 25 ಸಾವಿರಕ್ಕೂ ಹೆಚ್ಚು ಅರ್ಧ ಲೀಟರ್ ನ ಕುಡಿಯುವ ನೀರಿನ ಬಾಟಲ್ ವ್ಯವಸ್ಥೆಯನ್ನು ಕದಲೂರು ಉದಯ್ ಚಾರಿಟಬಲ್ ಟ್ರಸ್ಟ್(ರಿ.) ವತಿಯಿಂದ ಮಾಡಲಾಯಿತು ಎಂದು ಭಕ್ತಾದಿ ಸಿದ್ದರಾಜು ತಿಳಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಿದ್ದರಾಜು, ಸಮಾಜ ಸೇವಕ ಕದಲೂರು ಉದಯ್ ಅವರು ತಮ್ಮ ಕೈಲಾದ ಸಹಾಯವನ್ನು ಪ್ರತಿ ಗ್ರಾಮಗಳಿಗೆ ನೀಡುತ್ತಾ ಬಂದಿದ್ದಾರೆ.
ಈ ಬಾರಿ ಸುಮಾರು 25ಸಾವಿರಕ್ಕೂ ಅಧಿಕ ಭಕ್ತಾದಿಗಳು ಮಾರಮ್ಮ ಪರಕ್ಕೆ ಬರುವ ನಿರೀಕ್ಷೆಯಿದ್ದು, ಪ್ರತಿಯೊಬ್ಬರಿಗೂ ನೀರಿನ ವ್ಯವಸ್ಥೆ ಮಾಡಲು ಕದಲೂರು ಉದಯ್ ಚಾರಿಟಬಲ್ ಟ್ರಸ್ಟ್ ನಿರ್ಧರಿಸಿ 25000 ನೀರಿನ ಬಾಟಲ್ ಅನ್ನು ನೀಡಿದ್ದಾರೆ. ಅವರಿಗೆ ಒಳ್ಳೆಯದಾಗಲಿ ಎಂದು ಶುಭ ಕೋರಿದರು.
ಈ ಸಂದರ್ಭದಲ್ಲಿ ಟ್ರಸ್ಟ್ ನ ಸದಸ್ಯರಾದ ರವಿ ಕೆ.ಎಂ. ರವರು ಭೇಟಿ ನೀಡಿ, ದೇವಿಯ ದರ್ಶನ ಪಡೆದು, ನೀರಿನ ಬಾಟಲ್ ಗಳನ್ನು ಭಕ್ತಾದಿಗಳಿಗೆ ವಿತರಣೆ ಮಾಡಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಸದಸ್ಯ ಗುರುಪ್ರಸಾದ್. ಸಿಪಾಯಿ ಶ್ರೀನಿವಾಸ್ ಹಾಗೂ ಗ್ರಾಮಸ್ಥರು ಹಾಜರಿದ್ದರು.