Thursday, September 19, 2024

ಪ್ರಾಯೋಗಿಕ ಆವೃತ್ತಿ

ಶ್ರೀಕಾಲಭೈರವೇಶ್ವರ ದೇವಸ್ಥಾನ ಉದ್ಘಾಟನೆ

ಮಂಡ್ಯ ತಾಲ್ಲೂಕಿನ ಬಿ.ಗೌಡಗೆರೆ ಗ್ರಾಮದಲ್ಲಿ ಶ್ರೀಕಾಲಭೈರವೇಶ್ವರ ಹಾಗೂ ಮಾರಮ್ಮ ದೇವಸ್ಥಾನಗಳ ಉದ್ಘಾಟನಾ ಕಾರ್ಯಕ್ರಮವನ್ನು ಅ.21ರಂದು ಹಮ್ಮಿಕೊಳ್ಳಲಾಗಿದೆ ಎಂದು ಬಿ.ಗೌಡಗೆರೆ ಗ್ರಾ.ಪಂ.ಅಧ್ಯಕ್ಷ  ಮಹೇಶ್ ಬಿ.ಜೆ.ತಿಳಿಸಿದರು.

ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಆದಿಚುಂಚನಗಿರಿ ಕ್ಷೇತ್ರದ ಪರಮಪೂಜ್ಯ ಶ್ರೀ ನಿರ್ಮಲಾನಂದ ಸ್ವಾಮೀಜಿ ಅವರ ದಿವ್ಯ ಸಾನಿಧ್ಯದಲ್ಲಿ ಕುಂಭಾಭಿಷೇಕ ನಡೆಯಲಿದೆ, ಶಾಸಕ ಎಂ.ಶ್ರೀನಿವಾಸ್ ಸಮಾರಂಭ ಉದ್ಘಾಟಿಸುವರು. ಗ್ರಾ.ಪಂ.ಅಧ್ಯಕ್ಷ ಬಿ.ಜೆ.ಮಹೇಶ್ ಅಧ್ಯಕ್ಷತೆ ವಹಿಸುವರು ಎಂದರು.

ಮುಖ್ಯ ಅತಿಥಿಗಳಾಗಿ ಸಂಸದೆ ಸುಮಲತಾ  ಅಂಬರೀಶ್, ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ಯೋಜನಾಧಿಕಾರಿ ನಾರಾಯಣ ಪಟಾಳಿ, ಪಿಡಿಓ ಬಿ.ವಿ.ಶ್ರೀಧರ್ ಭಾಗವಹಿಸುವರು. ಅಂದು ಮಧ್ಯಾಹ್ನ 12 ಗಂಟೆಗೆ ಅನ್ನ ಸಂತರ್ಪಣೆಯನ್ನು ಏರ್ಪಡಿಸಲಾಗಿದ್ದು, ಹೆಚ್ಚಿನ ಸಂಖ್ಯೆಯನ್ನು ಸಾರ್ವಜನಿಕರು ಭಾಗವಹಿಸಬೇಕೆಂದು ಮನವಿ ಮಾಡಿದರು.

ಗೋಷ್ಠಿಯಲ್ಲಿ ಮುಖಂಡರಾದ ಜಿ.ಕೆ.ಶಶಿಕುಮಾರ್, ಕೌಶಿಕ್, ಮಹೇಂದ್ರ ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!