ಶ್ರೀರಂಗಪಟ್ಟಣ ದಸರಾ ಮಹೋತ್ಸವದ ಪ್ರಯುಕ್ತ ಜಿಲ್ಲಾಡಳಿತ ಮಂಡ್ಯ, ಶ್ರೀರಂಗಪಟ್ಟಣ ದಸರಾ ಸಮಿತಿ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಇವರ ಸಂಯುಕ್ತಾಶ್ರಯದಲ್ಲಿ ಅ.1ರಂದು ಬೆಳಿಗ್ಗೆ 9 ಗಂಟೆಗೆ ದಸರಾ ಉದ್ಯೋಗ ಮೇಳವನ್ನು ಶ್ರೀರಂಗಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಆಯೋಜಿಸಲಾಗಿದೆ.
ಮೇಳದಲ್ಲಿ 50ಕ್ಕೂ ಹೆಚ್ಚಿನ ಕಂಪನಿಗಳು ಭಾಗವಹಿಸಲಿದ್ದು, ಆಸಕ್ತ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ಯಾವುದೇ ಪದವಿ, ಬಿಎಸ್ಸಿ (ನರ್ಸಿಂಗ್), ಫಾರ್ಮಸಿ ಮತ್ತು ಟೈಲರಿಂಗ್ ಹುದ್ದೆಗಳಿಗೆ ಕನಿಷ್ಠ 18 ವರ್ಷಗಳಿಂದ 35 ವರ್ಷಗಳ ವಯೋಮಿತಿಯ ಅಭ್ಯರ್ಥಿಗಳು ಸ್ವ ವಿವರ ಹಾಗೂ ಮೂಲ ದಾಖಲಾತಿಗಳೊಂದಿಗೆ ಭಾಗವಹಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಮಂಡ್ಯ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳ ಕಛೇರಿ ದೂ.ಸಂ. 08232-295010 ಅಥವಾ ಮೊ.9164443223, 8152882461, 9464666996, 9945959002 ಸಂಪರ್ಕಿಸಬಹುದೆಂದು ಮಂಡ್ಯ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.