ಮಂಡ್ಯನಗರದ ಬನ್ನೂರು ರಸ್ತೆಯಲ್ಲಿರುವ ಶ್ರೀವಾಸವಿ ಕನ್ನಿಕಾ ಪರಮೇಶ್ವರಿ ದೇವಸ್ಥಾನದಲ್ಲಿ ಸೆ.26ರಿಂದ ಆ.5ರವರೆಗೆ ಶರನ್ನವರಾತ್ರಿ ಮಹೋತ್ಸವ ಹಮ್ಮಿಕೊಳ್ಳಲಾಗಿದೆ ಎಂದು ಮುಖಂಡ ಚಂದ್ರಶೇಖರ್ ತಿಳಿಸಿದರು.
ಮಂಡ್ಯದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರ ಅವರು ಸೆ.26ರಿಂದ ಅ.5ರ ವರೆಗೆ ಪ್ರತಿದಿನ ವಿವಿಧ ಅಲಂಕಾರಗಳು ನಡೆಯಲಿದೆ, ಪ್ರತಿದಿನ 8.30ಕ್ಕೆ ಮಹಾಮಂಗಳಾರತಿ ಹಾಗೂ ಪ್ರಸಾದ ವಿನಿಯೋಗ ಕಾರ್ಯಕ್ರಮ ನಡೆಯಲಿದೆ ಎಂದು ವಿವರಿಸಿದರು.
ಗೋಷ್ಠಿಯಲ್ಲಿ ಮುಖಂಡರಾದ ನಂಜುಂಡ ಗುಪ್ತ, ಕೃಷ್ಣಮೂರ್ತಿ ಹಾಗೂ ವರದರಾಜು ಉಪಸ್ಥಿತರಿದ್ದರು.