ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು (ವೆಂಕಟರಮಣೇಗೌಡ)ಅವರು ಏ.12 ರಂದು ಶಾಸಕ ಗಣಿಗ ರವಿಕುಮಾರ್ ಅವರ ಜೊತೆಗೂಡಿ ಪ್ರಚಾರ ನಡೆಸಲಿದ್ದಾರೆ.
ಮಂಡ್ಯ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಶಾಸಕ ಗಣಿಗ ರವಿಕುಮಾರ್ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಅವರು ನಡೆಸುವ ಪ್ರಚಾರ ಕಾರ್ಯದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಾಗೂ ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮಂಡ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡರು ಮನವಿ ಮಾಡಿದ್ದಾರೆ.
ನಾಳೆ ಬೆಳಿಗ್ಗೆ 8 ಗಂಟೆಗೆ ಚಿಕ್ಕಮಂಡ್ಯ ಗ್ರಾಮದಿಂದ ಪ್ರಚಾರ ಕಾರ್ಯ ಆರಂಭಗೊಳ್ಳಲಿದ್ದು, ಗೋಪಾಲಪುರ, ಸಾತನೂರು, ಹುಲಿವಾನ, ಕೆರಗೋಡು ಸೇರಿದಂತೆ ಮಂಡ್ಯ ವಿಧಾನಸಭಾ ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ಪ್ರಚಾರ ನಡೆಯಲಿದ್ದು, ರಾತ್ರಿ ಎಂಟು ಗಂಟೆಗೆ ಉಮ್ಮಡಹಳ್ಳಿ ಗ್ರಾಮದಲ್ಲಿ ಪ್ರಚಾರ ಕೊನೆಗೊಳ್ಳಲಿದೆ.