Tuesday, May 21, 2024

ಪ್ರಾಯೋಗಿಕ ಆವೃತ್ತಿ

ರಾಜ್ಯ ಮಟ್ಟದ ವಿಜ್ಞಾನ ಮೇಳ : ಬಸರಾಳು ವಸತಿ ಶಾಲೆಯ ವಿದ್ಯಾರ್ಥಿನಿಯರು ಪ್ರಥಮ

ಬೆಂಗಳೂರಿನ ಅರಮನೆ ಮೈದಾನದಲ್ಲಿ ಸಮಾಜ ಕಲ್ಯಾಣ ಇಲಾಖೆ, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಹಾಗೂ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಗಳ ವತಿಯಿಂದ ನಡೆದ ರಾಜ್ಯ ಮಟ್ಟದ ವಿಜ್ಞಾನ ಮೇಳದಲ್ಲಿ ಮಂಡ್ಯ ತಾಲ್ಲೂಕಿನ ಬಸರಾಳು ಇಂದಿರಾಗಾಂಧಿ ವಸತಿ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಪ್ರಥಮ ಬಹುಮಾನ ಪಡೆದಿದ್ದಾರೆ.

9ನೇ ತರಗತಿ ವಿದ್ಯಾರ್ಥಿನಿಯರಾದ ಪ್ರಿಯಾ ಮತ್ತು ಮೌಲ್ಯ ಸಿ.ಕೆ., 8ನೇ ತರಗತಿ ವಿದ್ಯಾರ್ಥಿನಿಯರಾದ ಯಶಸ್ವಿನಿ, ಚಿತ್ರ, ನವ್ಯಶ್ರೀ ಅವರು ಮೈಸೂರು ವಿಭಾಗದಿಂದ ಸ್ಪರ್ಧಿಸಿ ಪ್ರದರ್ಶಿಸಿದ ‘ಸಸ್ಟೆನಬಲ್ ಅಂಡ್ ಪ್ಲಡ್ ಮ್ಯಾನೇಜ್‌ಮೆಂಟ್’ ಎಂಬ ಪ್ರಾತ್ಯಕ್ಷಿಕೆಗೆ ಪ್ರಥಮ ಬಹುಮಾನ ಮತ್ತು ಮೂರು ಲಕ್ಷ ರೂಪಾಯಿಗಳ ನಗದು ಬಹುಮಾನ ಬಂದಿದೆ.

ವಿದ್ಯಾರ್ಥಿನಿಯರ ಈ ಸಾಧನೆಗೆ ಪ್ರಾಂಶುಪಾಲ ಪುರುಷೋತ್ತಮ ಹೆಚ್.ಬಿ, ಮಾರ್ಗದರ್ಶಿ ಶಿಕ್ಷಕರಾದ ರವಿಕುಮಾರ್, ಭಾರ್ಗವಿ ಪ್ರಮುಖ ಪಾತ್ರ ನಿರ್ವಹಿಸಿದ್ದರು. ಶಾಲೆಯ ಸಹೋದ್ಯೋಗಿ ಶಿಕ್ಷಕರು, ಬೋಧಕೇತರ ಸಿಬ್ಬಂದಿಗಳ ಬೆಂಬಲವಾಗಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!