ಡೆಂಗ್ಯು ಜ್ವರದಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾಳೆ.
ಶ್ರೀರಂಗಪಟ್ಟಣ ತಾಲ್ಲೂಕಿನ ಮರಳಾಗಾಲ ನಿವಾಸಿ ಶ್ರೀಮತಿ ಮಣಿ ಹಾಗೂ ಶ್ರೀ ಚಿಕ್ಕಮಾದಶೆಟ್ಟಿ ಇವರ ಪುತ್ರಿ ಕು.ಪೂರ್ಣಿಮ(14) ಸಾವನ್ನಪ್ಪಿರುವ ವಿದ್ಯಾರ್ಥಿನಿ. ಈಕೆ ದೊಡ್ಡಪಾಳ್ಯದ ಸರ್ಕಾರಿ ಪ್ರೌಢಶಾಲೆಯಲ್ಲಿ 9 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಳು.
ಪೂರ್ಣಿಮಾ ನಿಧನದ ಅಂಗವಾಗಿ ಇಂದು ಶಾಲೆಗೆ ರಜೆ ನೀಡಲಾಗಿತ್ತು. ವಿದ್ಯಾರ್ಥಿನಿಯ ಸಾವಿಗೆ ಶಿಕ್ಷಕರು ಹಾಗೂ ಸಹಪಾಠಿಗಳು ಕಂಬನಿ ಮಿಡಿದಿದ್ದಾರೆ.
ವಿದ್ಯಾರ್ಥಿನಿಯ ಅಂತ್ಯಕ್ರಿಯೆ ಸ್ವಗ್ರಾಮ ಮರಳಾಗಾಲ ಗ್ರಾಮದಲ್ಲಿ ನಡೆಯಿತು