ರಾಜಸ್ಥಾನದ ದೌಸಾ ಜಿಲ್ಲೆಯಲ್ಲಿ 4 ವರ್ಷದ ದಲಿತ ಬಾಲಕಿಯ ಮೇಲೆ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಓರ್ವರು ಅತ್ಯಾಚಾರವೆಸಗಿರುವ ಆರೋಪ ಕೇಳಿ ಬಂದಿದ್ದು, ಪೊಲೀಸ್ ಠಾಣೆಯ ಮುಂದೆ ಜಮಾಯಿಸಿದ ಸ್ಥಳೀಯರು ಪೊಲೀಸ್ ಅಧಿಕಾರಿಗೆ ಥಳಿಸಿದ್ದಾರೆ.
ಎಎಸ್ಪಿ ರಾಮಚಂದ್ರ ಸಿಂಗ್ ನೆಹ್ರಾ ಈ ಕುರಿತು ಮಾಹಿತಿಯನ್ನು ನೀಡಿದ್ದು, ದೌಸಾ ಜಿಲ್ಲೆಯ ಲಾಲ್ಸೋಟ್ ಪ್ರದೇಶದಲ್ಲಿ ಘಟನೆ ನಡೆದಿದೆ. ಭೂಪೇಂದ್ರ ಸಿಂಗ್ ಎಂಬ ಆರೋಪಿತ ಸಬ್ ಇನ್ಸ್ಪೆಕ್ಟರ್ ಮಧ್ಯಾಹ್ನ ಅಪ್ರಾಪ್ತಿಯನ್ನು ತನ್ನ ಕೋಣೆಗೆ ಕರೆದೊಯ್ದು ಅತ್ಯಾಚಾರವೆಸಗಿದ್ದಾನೆ ಎಂದು ಆರೋಪಿಸಲಾಗಿದೆ. ಇದೀಗ ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಚುನಾವಣಾ ಕರ್ತವ್ಯದಲ್ಲಿದ್ದ ಭೂಪೇಂದ್ರ ಸಿಂಗ್ ಬಾಲಕಿಯನ್ನು ತನ್ನ ಕೋಣೆಗೆ ಕರೆದೊಯ್ದು ಅತ್ಯಾಚಾರವೆಸಗಿದ್ದಾನೆ ಎಂದು ಆರೋಪಿಸಲಾಗಿದೆ. ಬಾಲಕಿಯನ್ನು ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ.
लालसोट में 7 साल की दलित बच्ची के साथ पुलिसकर्मी द्वारा दुष्कर्म की घटना से लोगों में भारी आक्रोश है। मासूम को न्याय दिलाने के लिए मौके पर पहुंच गया हूं। अशोक गहलोत सरकार के नाकारापन से निरंकुश हुई पुलिस चुनाव जैसे संवेदनशील मौके पर भी ज्यादती करने से बाज नहीं आ रही। pic.twitter.com/xnIB13eyWi
— Dr.Kirodi Lal Meena (@DrKirodilalBJP) November 10, 2023
“>
ವಿಷಯ ತಿಳಿದು ಸ್ಥಳೀಯ ನಿವಾಸಿಗಳು ಹೆಚ್ಚಿನ ಸಂಖ್ಯೆಯಲ್ಲಿ ರಾಹುವಾಸ್ ಪೊಲೀಸ್ ಠಾಣೆಗೆ ತೆರಳಿ ಮುತ್ತಿಗೆ ಹಾಕಿದ್ದಾರೆ. ಪೊಲೀಸರ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ. ಆರೋಪಿತ ಪೊಲೀಸ್ ಅಧಿಕಾರಿಗೆ ಥಳಿಸಿದ್ದಾರೆ.
ಭಾರತೀಯ ಜನತಾ ಪಕ್ಷದ ಸಂಸದ ಕಿರೋಡಿ ಲಾಲ್ ಮೀನಾ ಕೂಡ ಸ್ಥಳಕ್ಕಾಗಮಿಸಿ, ಲಾಲ್ಸೋಟ್ನಲ್ಲಿ ದಲಿತ ಬಾಲಕಿಯ ಮೇಲೆ ಪೋಲೀಸ್ ಅಧಿಕಾರಿಯೊಬ್ಬರು ಅತ್ಯಾಚಾರವೆಸಗಿದ ಘಟನೆಯಿಂದ ಜನರಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ. ಅಮಾಯಕ ಮಗುವಿಗೆ ನ್ಯಾಯ ದೊರಕಿಸಿಕೊಡಲು ಸ್ಥಳಕ್ಕೆ ಬಂದಿದ್ದೇನೆ ಎಂದು ಹೇಳಿದ್ದಾರೆ.
ಆರೋಪಿ ಎಎಸ್ಐ ಭೂಪೇಂದ್ರ ಸಿಂಗ್ ಅವರು ಕಠಿಣ ಕ್ರಮವನ್ನು ಎದುರಿಸಲಿದ್ದಾರೆ ಮತ್ತು ಶೀಘ್ರದಲ್ಲೇ ಅವರನ್ನು ಕೆಲಸದಿಂದ ವಜಾಗೊಳಿಸಲಾಗುವುದು. ಪೊಲೀಸರು ಕುಟುಂಬದ ಸದಸ್ಯರಿಗೆ ಎಲ್ಲಾ ರೀತಿಯಲ್ಲಿ ನೆರವು ನೀಡುತ್ತಾರೆ. ಸಂತ್ರಸ್ತೆಯ ಕುಟುಂಬಕ್ಕೆ ಪರಿಹಾರ ನೀಡಲಾಗುವುದು ಎಂದು ಮೀನಾ ಹೇಳಿದ್ದಾರೆ.