ಆಕಸ್ಮಿಕ ಬೆಂಕಿ ತಗುಲಿ ಒಂದು ಎಕರೆ ಕಬ್ಬು ಬೆಳೆ ಭಸ್ಮವಾಗಿರುವ ಘಟನೆ ಮಂಡ್ಯ ತಾಲ್ಲೂಕಿನ ಬೆಳ್ಳುಂಡಗೆರೆ ಗ್ರಾಮದ ಎಲ್ಲೆಯಲ್ಲಿ ಜರುಗಿದೆ.
ಈ ದುರ್ಘಟನೆಯಿಂದ ಕೀಲಾರ ಗ್ರಾಮದ ನಂದಿನಿ ಎಂಬುವವರಿಗೆ ಸೇರಿದ ಒಂದು ಎಕರೆ ಕಬ್ಬು ಬೆಂಕಿಗಾಹುತಿಯಾಗಿದ್ದು, ₹1.50 ಲಕ್ಷ ನಷ್ಟ ಉಂಟಾಗಿದೆ.
ಶುಕ್ರವಾರ ಸಂಜೆ 5 ಗಂಟೆ ಸುಮಾರಿನಲ್ಲಿ ಕಾಣಿಸಿಕೊಂಡ ಬೆಂಕಿ ಕ್ಷಣಾರ್ಧದಲ್ಲಿ ಗದ್ದೆಯನ್ನೆಲ್ಲ ಅವರಿಸಿಕೊಂಡು ಕಬ್ಬನ್ನು ಭಸ್ಮ ಮಾಡಿತು. ಬಿಸಿಲಿನ ತಾಪ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಕಬ್ಬು ಬೆಂಕಿಯ ಕೆನ್ನಾಲಿಗೆ ಅತಿವೇಗವಾಗಿ ತುತ್ತಾಯಿತು. ವಿಷಯ ತಿಳಿದು ಅಗ್ನಿಶಾಮಕ ವಾಹನ ಸ್ಥಳಕ್ಕೆ ಆಗಮಿಸಿ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ.
ಘಟನೆ ಕುರಿತು ಮಂಡ್ಯ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದೆ.