Thursday, September 19, 2024

ಪ್ರಾಯೋಗಿಕ ಆವೃತ್ತಿ

ಕಬ್ಬು ದರ ನಿಗದಿಗೆ ಸಿಎಂ ಜೊತೆ ಚರ್ಚೆ : ಸಚಿವ ನಾರಾಯಣಗೌಡ

ಕಬ್ಬಿನ ದರ ನಿಗದಿ ಬಗ್ಗೆ ಶೀಘ್ರದಲ್ಲೆ ಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ನಾರಾಯಣಗೌಡ ಭರವಸೆ ನೀಡಿದರು.

ಮಂಡ್ಯನಗರದಲ್ಲಿ ಕಳೆದ 13 ದಿನಗಳಿಂದ ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ನಡೆಸುತ್ತಿರುವ ರೈತರನ್ನು ಭೇಟಿ ಮಾಡಿ ಮಾತನಾಡಿದ ಅವರು, ಈ ಬಗ್ಗೆ ಚರ್ಚೆ ನಡೆಸಲು ಮುಖ್ಯಮಂತ್ರಿಗಳ ಬಳಿ ದಿನಾಂಕ ಪಡೆಯಲಾಗುವುದು, ರೈತರ ಬೇಡಿಕೆಯಂತೆ ಮೈಷುಗರ್ ಕಾರ್ಖಾನೆ ಪ್ರಾರಂಭಿಸಿದ್ದೇವೆ, ಮುಂದಿನ ದಿನಗಳಲ್ಲಿ ಕಬ್ಬು, ಹಾಲಿನ ದರ ನಿಗಧಿ ಬಗ್ಗೆ ಕ್ರಮ ಕೈಗೊಳ್ಳುವುದಾಗಿಯೂ ತಿಳಿಸಿದರು.

ಈಗಾಗಲೇ ಈ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗಿದ್ದು, ಶೀಘ್ರದಲ್ಲೇ ಮಾನ್ಯ ಮುಖ್ಯಮಂತ್ರಿಗಳು ತೀರ್ಮಾನ ಕೈಗೊಳ್ಳಲಿದ್ದು, ಸಿಹಿ ಸುದ್ದಿ ನೀಡಲಿದ್ದಾರೆ ಎಂದರು.

ಈ ಸಂದರ್ಭದಲ್ಲಿ ರೈತಮುಖಂಡ ಜಯರಾಂ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!