Saturday, May 18, 2024

ಪ್ರಾಯೋಗಿಕ ಆವೃತ್ತಿ

ಅಂಬರೀಶ್ ಪುಣ್ಯಸ್ಮರಣೆ: ದೊಡ್ಡರಸಿನಕೆರೆಯಲ್ಲಿ ಸಮಾಧಿಗೆ ಪೂಜೆ ಸಲ್ಲಿಸಿದ ಸುಮಲತಾ

ರೆಬಲ್ ಸ್ಟಾರ್ ಅಂಬರೀಶ್ ಅವರ 5ನೇ ವರ್ಷದ ಪುಣ್ಯ ಸ್ಮರಣೆ ಹಿನ್ನೆಲೆಯಲ್ಲಿ ಅಂಬರೀಶ್ ಅವರ ಹುಟ್ಟೂರು ದೊಡ್ಡರಸಿನಕೆರೆ ಗ್ರಾಮದಲ್ಲಿರುವ ಸಮಾಧಿಗೆ ಸುಮಲತಾ ಅಂಬರೀಶ್ ಪೂಜೆ ಸಲ್ಲಿಸಿದರು.

ನಂತರ ಮಾತನಾಡಿದ ಅವರು, ಮಂಡ್ಯದಲ್ಲಿ ಇಂದು ಅಂಬಿ ಕನಸಿನ ಫೌಂಡೇಶನ್ ಲೋಕಾರ್ಪಣೆಯಾಗಲಿದೆ,
ಅಂಬಿ ಅವ್ರನ್ನ ಯಾರು ಮರೆತಿಲ್ಲ. ನಾನು ಹೋದ ಕಡೆಯಲ್ಲ ಅಂಬರೀಶ್ ಅವ್ರನ್ನ ನೆನೆಯುತ್ತಾರೆ. ಅವ್ರ ಬಗ್ಗೆ ಪ್ರತಿದಿನ, ಪ್ರತಿಕ್ಷಣ ಮಾತನಾಡ್ತಾರೆ. ಅಂಬಿ ನೆನಪಾಗದ ದಿನ, ಕ್ಷಣವೇ ಇಲ್ಲ. ಅಭಿಷೇಕ್ ಸಿನೆಮಾ ಈ ದಿನವೇ ರಿಲೀಸ್‌ಗೆ ಬರುತ್ತೆ ಎಂದು ನಾವು ಅಂದುಕೊಂಡಿರಲಿಲ್ಲ. ಅಂಬರೀಶ್ ಅವರ ಆಶೀರ್ವಾದವೇ ಅನ್ಸುತ್ತೆ ಎಂದರು.

ಅಭಿಮಾನಿಗಳು ಅಂಬರೀಶ್ ಅವ್ರನ್ನ ಅಭಿಯಲ್ಲಿ ಕಾಣ್ತಾರೆ. ಹಂತಹಂತವಾಗಿ ಕಷ್ಟಪಟ್ಟು ಅಭಿಷೇಕ್ ಬೆಳೆದು ಬರಬೇಕು. ತಂದೆ ಹಾಗೇ ಅಭಿ ಕೂಡ ಅಭಿಮಾನಿಗಳ ಪ್ರೀತಿ ಸಂಪಾದನೆ ಮಾಡಬೇಕು. ಇವತ್ತು ಸಂಪೂರ್ಣ ಅಂಬರೀಶ್ ಅವರಿಗಾಗೇ ಮೀಸಲು. ಈ ದಿನ ಯಾವುದೇ ರಾಜಕೀಯ ಮಾತನಾಡಲ್ಲ.
ಅಂಬರೀಶ್ ಕನಸನ್ನ ಮುಂದುವರಿಸುವುದಷ್ಟೇ ನಮ್ಮ ಕೆಲಸ. ಡಿಕೆಶಿ ಕೇಸ್ ವಾಪಾಸ್ ಪಡೆಯುವ ಬಗ್ಗೆ ನಾನು ಕಮೆಂಟ್ ಮಾಡಲ್ಲ. ಆ ಬಗ್ಗೆ ಮಾಹಿತಿ ಇಲ್ಲ, ನಾನು ಮಾತನಾಡಲ್ಲ ಎಂದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!