Wednesday, May 22, 2024

ಪ್ರಾಯೋಗಿಕ ಆವೃತ್ತಿ

ನಾಳೆ ಬೆಂಗಳೂರಿನಲ್ಲಿ ಸುಮಲತಾ ಬಿಜೆಪಿ ಸೇರ್ಪಡೆ

ಮಂಡ್ಯ ಲೋಕಸಭಾ ಕಣದಿಂದ ಹಿಂದೆ ಸರಿಯುವುದಾಗಿ ಘೋಷಿಸಿದ್ದ ಸುಮಲತಾ ನಾಳೆ ಬೆಂಗಳೂರಿನಲ್ಲಿ ಅಧಿಕೃತವಾಗಿ  ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ.

ಮಂಡ್ಯದ ಅಭಿವೃದ್ಧಿಯೇ ನನ್ನ ಮೂಲ ಮಂತ್ರವಾಗಿಸಿಕೊಂಡು ಹಾಗೂ ನಮ್ಮೆಲ್ಲರ ನೆಚ್ಚಿನ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿ ಆಗಲಿ ಎನ್ನುವ ಆಶಯದೊಂದಿಗೆ ಭಾರತೀಯ ಜನತಾ ಪಕ್ಷವನ್ನು ಬೆಂಬಲಿಸುವುದಾಗಿ ಘೋಷಿಸಿದ್ದೆ. ಅದರಂತೆಯೇ, ಬಿಜೆಪಿ ನಾಯಕರ ಸಮ್ಮುಖದಲ್ಲಿ 5 ಏ.5ರಂದು ಶುಕ್ರವಾರ ಬೆಳಿಗ್ಗೆ 11.30ಕ್ಕೆ ಬೆಂಗಳೂರಿನ ಭಾರತೀಯ ಜನತಾ ಪಕ್ಷದ ಕಚೇರಿಯಲ್ಲಿ ಅಧಿಕೃತವಾಗಿ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆ ಆಗುತ್ತಿರುವೆ ಎಂದು ಸಾಮಾಜಿಕ ಜಾಲತಾಣ ‘ಎಕ್ಸ್’ ನಲ್ಲಿ ಅವರು ಬರೆದುಕೊಂಡಿದ್ಧಾರೆ.

“>

ಕರುನಾಡಿನ ಸಕ್ಕರೆಯ ನಾಡು ಮಂಡ್ಯದ ನನ್ನ ಸ್ವಾಭಿಮಾನಿ ಬಂಧುಗಳ, ಡಾ.ಅಂಬರೀಶ್ ಅವರ ಅಭಿಮಾನಿಗಳ ಹಾಗೂ ಹಿತೈಷಿಗಳ ಹಾರೈಕೆ ಮತ್ತು ಆಶೀರ್ವಾದ ಎಂದಿನಂತೆ ಇರಲಿ ಎಂದು ಅವರು ಕೋರಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!