Thursday, September 19, 2024

ಪ್ರಾಯೋಗಿಕ ಆವೃತ್ತಿ

ಕುತೂಹಲ ಕೆರಳಿಸಿದ ಸಂಸದೆ ಸುಮಲತಾ ದೆಹಲಿ ಭೇಟಿ: ಮುಂದಿನ ನಡೆಯೇನು ?

ಬಿಜೆಪಿ ಹೈಕಮಾಂಡ್ ಬುಲಾವ್ ಹಿನ್ನೆಲೆಯಲ್ಲಿ ಭಾನುವಾರ ಮಧ್ಯಾಹ್ನ 2.30ರ ಸುಮಾರಿಗೆ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ದೆಹಲಿಗೆ ತೆರಳಿರುವುದು ಮಂಡ್ಯ ಜಿಲ್ಲಾ ರಾಜಕಾರಣದಲ್ಲಿ ಕುತೂಹಲ ಕೆರಳಿಸಿದೆ.

ಸುಮಲತಾ ಅಂಬರೀಶ್ ಮಂಡ್ಯ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಜೆಡಿಎಸ್ ಜೊತೆಗೆ ಬಿಜೆಪಿ ಮೈತ್ರಿ ಮಾಡಿಕೊಂಡ ಹಿನ್ನೆಲೆಯಲ್ಲಿ ಮಂಡ್ಯ ಟಿಕೆಟ್ ದಳಪತಿಗಳ ಪಾಲಾಗೋದು ಬಹುತೇಕ ಖಚಿತವಾಗಿದೆ. ಇಂತಹ ಸನ್ನಿವೇಶದಲ್ಲಿ ಬಿಜೆಪಿ ಹೈಕಮಾಂಡ್ ಸುಮಲತಾ ಅವರಿಗೆ ಏನನ್ನು ಸೂಚಿಸಲಿದೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ.

ಬಹುಶಃ ಮಂಡ್ಯ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಗೆ ಸಹಕರಿಸುವಂತೆ ಹೈಕಮಾಂಡ್​ ಸೂಚನೆ ನೀಡುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ. ಆದರೆ ಬಿಜೆಪಿ-ಜೆಡಿಎಸ್ ಮೈತ್ರಿಯಾದಗಿನಿಂದಲೂ ಮಂಡ್ಯ ಬಿಟ್ಟು ಹೋಗಲ್ಲ ಎಂದು ಪಟ್ಟು ಹಿಡಿರುವ ಸುಮಲತಾ ಅಂಬರೀಶ್, ಈ ಚುನಾವಣೆಯಿಂದ ಹಿಂದೆ ಸರಿಯುತ್ತಾರಾ ? ಅಥವಾ ಕಳೆದ ಚುನಾವಣೆಯಂತೆ ಸ್ವಾಭಿಮಾನಿಯಾಗಿ ಸ್ಪರ್ಧೆ ಮಾಡುತ್ತಾರಾ ? ಎನ್ನುವುದನ್ನು ಕಾದು ನೋಡಬೇಕಿದೆ.

ಸುಮಲತಾ ನನ್ನ ಅಕ್ಕ ಇದ್ದಂತೆ ಎಂದಿದ್ದ ಹೆಚ್.ಡಿ.ಕೆ

ಕಳೆದ ಮಾ.15ರಂದು ಮಂಡ್ಯದಲ್ಲಿ ಜೆಡಿಎಸ್ ಕಾರ್ಯಕರ್ತರ ಪೂರ್ವಭಾವಿ ಸಭೆ ಕರೆದಿದ್ದ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ, ಸಂಸದೆ ಸುಮಲತಾ ನನ್ನ ಅಕ್ಕ ಇದ್ದಂತೆ, ಇನ್ನು ಮುಂದೆ ವೈಮನಸ್ಸನ್ನು ಮುಂದುವರಿಸಿಕೊಂಡು ಹೋಗುವುದಿಲ್ಲ ಎಂದು ಹೇಳಿದ್ದರು.

ಬರುವ ಮಾ.19 ರಂದು ಹೆಚ್‌ಡಿಕೆ ಹೃದಯ ಶಸ್ತ್ರ ಚಿಕಿತ್ಸೆಗೆ ಒಳಗಾಗಲಿದ್ದಿದ್ದಾರೆ, ಅದಕ್ಕೂ ಮೊದಲು ಕುಮಾರಸ್ವಾಮಿಯವರನನ್ಉ  ಸುಮಲತಾ ಅವರು ಭೇಟಿಯಾಗಿ ಆರೋಗ್ಯ ವಿಚಾರಿಸುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!