Friday, September 20, 2024

ಪ್ರಾಯೋಗಿಕ ಆವೃತ್ತಿ

ಕಾಂಗ್ರೆಸ್ ಬೆನ್ನಿಗೆ ನಿಂತ ಅಹಿಂದ ಮತದಾರರು – ಸುಂಡಹಳ್ಳಿ ಮಂಜುನಾಥ್

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಅಲ್ಪಸಂಖ್ಯಾತರು, ಹಿಂದುಳಿದರು ಹಾಗೂ ದಲಿತರು ಕಾಂಗ್ರೆಸ್ ಪಕ್ಷದ ಪರ ಮತ ಚಲಾಯಿಸಿದ್ದರಿಂದ ಕಾಂಗ್ರೆಸ್ ಪಕ್ಷ ಮಂಡ್ಯ ಜಿಲ್ಲೆಯ 6 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲು ಸಾಧ್ಯವಾಯಿತು ಎಂದು ಮಂಡ್ಯ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸುಂಡಹಳ್ಳಿ ಮಂಜುನಾಥ್ ಹೇಳಿದರು.

ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಂಡ್ಯ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಕಾರಣರಾದ ಎಲ್ಲ ಮತದಾರರು, ಕಾರ್ಯಕರ್ತರು ಹಾಗೂ ಮುಖಂಡರಿಗೆ ಧನ್ಯವಾದಗಳನ್ನು ಅರ್ಪಿಸುತ್ತೇವೆ ಎಂದು ಹೇಳಿದರು.

ಕಾಂಗ್ರೆಸ್ ಪಕ್ಷವು ನೀಡಿದ ಪ್ರಮುಖ 5 ಗ್ಯಾರೆಂಟಿಗಳ ಮೇಲೆ ವಿಶ್ವಾಸವಿಟ್ಟು ಸಮಾಜದ ಎಲ್ಲ ವರ್ಗದ ಮಧ್ಯಮ ವರ್ಗ ಹಾಗೂ ಬಡವರು ಒಕ್ಕೊರಲಿನಿಂದ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿದ್ದಾರೆ. ಮುಂಬರುವ ದಿನಗಳಲ್ಲಿ ನೀಡಿದ ಭರವಸೆಯಂತೆ ಎಲ್ಲಾ ಯೋಜನೆಗಳನ್ನು ಪಕ್ಷವು ಜಾರಿಗೊಳಿಸಲು ಬದ್ಧವಾಗಿದೆ ಎಂದು ಭರವಸೆ ನೀಡಿದರು.

ಗೋಷ್ಠಿಯಲ್ಲಿ ಮಂಡ್ಯ ಜಿಲ್ಲಾ ಒಬಿಸಿ ಘಟಕದ ಜಿಲ್ಲಾಧ್ಯಕ್ಷ ಸಾತನೂರು ಕೃಷ್ಣ, ಅಲ್ಪ ಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಮುಜಾಯಿದ್, ಮುಖಂಡರಾದ ಮಹೇಶ್, ಶಿವರುದ್ರ, ಸೋಮಶೇಖರ್ ಮತ್ತಿತರರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!