ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಎನ್.ಡಿ.ಎ ಅಭ್ಯರ್ಥಿ ಹೆಚ್.ಡಿ ಕುಮಾರಸ್ವಾಮಿ 2 ಲಕ್ಷಕ್ಕೂ ಅಧಿಕ ಮತಗಳಿಂದ ಜಯಗಳಿಸಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಸಂಪುಟ ಆಡಳಿತದಲ್ಲಿ ಕೇಂದ್ರ ಸಚಿವರಾಗಲಿದ್ದಾರೆ ಎಂದು ಬಿಜೆಪಿ ಮುಖಂಡ ಗುರುಪಾದಸ್ವಾಮಿ ಅಭಿಮತ ವ್ಯಕ್ತಪಡಿಸಿದ್ದಾರೆ.
ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು , ಪ್ರಧಾನಿ ನರೇಂದ್ರ ಮೋದಿರವರ ಉತ್ತಮ ಆಡಳಿತದಲ್ಲಿ ಭಾರತ ಅಭಿವೃದ್ಧಿಯತ್ತ ಸಾಗಿದೆ. ಕೇಂದ್ರ ಸರ್ಕಾರದ ಹತ್ತು ವರ್ಷದ ಸಾಧನೆಗಳು ದೇಶದ ಕಟ್ಟಕಡೆಯ ವ್ಯಕ್ತಿಗೆ ತಲುಪಿದೆ. ಯುವ ಉದ್ಯಮಗಳ ಸ್ಥಾಪಕರಿಗೆ ಪ್ರೋತ್ಸಾಹ, ರೈತಾಪಿ ಕೃಷಿಕರು ಶ್ರಮಿಕ ವರ್ಗದವರನ್ನ ಮುಖ್ಯವಾಹಿನಿಗೆ ತರಲು ಕೇಂದ್ರ ಸರ್ಕಾರ ವಿಶ್ವಕರ್ಮ ಯೋಜನೆಗಳನ್ನ ಜಾರಿಗೆ ತಂದಿದೆ ಎಂದರು.
ಈ ಬಾರಿಯ ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಎನ್.ಡಿ.ಎ ಮೈತ್ರಿ ಅಭ್ಯರ್ಥಿ ಹೆಚ್. ಡಿ ಕುಮಾರಸ್ವಾಮಿ ರವರನ್ನು ಅಧಿಕ ಮತಗಳ ಮುನ್ನಡೆಯಿಂದ ಜಯಗಳಿಸುವಂತೆ ಮಂಡ್ಯ ಜನತೆ ಮುಂದಾಗಬೇಕಿದೆ ಎಂದರು.
ಗೋಷ್ಠಿಯಲ್ಲಿ ರಾಜೇಂದ್ರ , ನವೀನ್ ಕುಮಾರ್ , ರಂಗನಾಥ್ , ಪ್ರಭು ಸ್ವಾಮಿ , ರಾಜೇಶ್ , ಪ್ರಸನ್ನ ಹಾಜರಿದ್ದರು.