Thursday, September 19, 2024

ಪ್ರಾಯೋಗಿಕ ಆವೃತ್ತಿ

ಕಾವೇರಿ ಪ್ರವಾಹ| ಎಣ್ಣೆಹೊಳೆಕೊಪ್ಪಲು ಗ್ರಾಮಕ್ಕೆ ಸುರೇಶ್ ಬಾಬು- ನಿಖಿಲ್ ಕುಮಾರಸ್ವಾಮಿ ಭೇಟಿ

ಕಾವೇರಿ ನದಿಯ ಪ್ರವಾಹದಿಂದ ಜಲಾವೃತವಾಗಿರುವ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಎಣ್ಣೆಹೊಳೆ ಕೊಪ್ಪಲು ಗ್ರಾಮ ಗುರುವಾರ ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು, ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹಾಗೂ ಮಾಜಿ ಸಚಿವ ಸಿ.ಎಸ್.ಪುಟ್ಟರಾಜು,, ಶಾಸಕ ಹೆಚ್.ಟಿ.ಮಂಜು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಗ್ರಾಮದೆಲ್ಲೆಡೆ ಸುತ್ತಾಡಿ ಪರಿಸ್ಥಿತಿಯನ್ನು ಅವಲೋಕಿಸಿದ ಅವರು, ಸ್ಥಳೀಯ ಮುಖಂಡರು, ಗ್ರಾಮಸ್ಥರಿಂದ ಮಾಹಿತಿ ಪಡೆದದರು.

ಅರಳಕುಪ್ಪೆಗೆ ಭೇಟಿ

ಪಾಂಡವಪುರ ತಾಲ್ಲೂಕು ಅರಳಕುಪ್ಪೆ ಗ್ರಾಮದ ಲಕ್ಷ್ಮಣ್ ಎಂಬುವವರಿಗೆ ಸೇರಿದ ಹೊಸಕೊಪ್ಪಲು ಎಲ್ಲೆ ಸರ್ವೆ ನಂ.177/2 ರ ಜಮೀನಿನಲ್ಲಿ ಇದೇ ಆ.11 ರಂದು ಕೆಂದ್ರ ಉಕ್ಕು ಹಾಗೂ ಬೃಹತ್ ಕೈಗಾರಿಕಾ ಸಚಿವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ರವರು ರೈತರ ಜೊತೆ ಭತ್ತ ನಾಟಿ ಮಾಡಲಿದ್ದಾರೆ.

ಈ ಹಿನ್ನೆಲೆಯಲ್ಲಿ ನಿಖಿಲ್ ಕುಮಾರಸ್ವಾಮಿ ಅವರೊಂದಿಗೆ ಜೆಡಿಎಸ್ ನಾಯಕರು ಇಂದು ಜಮೀನಿಗೆ ಭೇಟಿ ನೀಡಿ ಪರಿಶಿಲನೆ ನಡೆಸಿದರು. ಈ ಸಂದರ್ಭದಲ್ಲಿ ಜಿಪಂ ಮಾಜಿ ಸದಸ್ಯ ಸಿ.ಅಶೋಕ್, ಯುವ ಮುಖಂಡ ಸಿ.ಪಿ.ಶಿವರಾಜ್ ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!