ಸಮಾಜ ಸೇವೆ ಮಾಡಿಕೊಂಡು ಕ್ಷೇತ್ರದ ಜನರ ಕಷ್ಟ-ಸುಖಗಳಲ್ಲಿ ಭಾಗಿಯಾಗುತ್ತಾ ತಮ್ಮ ಪಾಡಿಗೆ ಇರುವ ಮಲ್ಲಿಕಾರ್ಜುನ (ಫೈಟರ್ ರವಿ) ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಶಾಸಕ ಸುರೇಶ್ ಗೌಡ ಬಹಿರಂಗವಾಗಿ ಅವರ ಕ್ಷಮೆಯಾಚಿಸಬೇಕು ಎಂದು ಫೈಟರ್ ರವಿ ಅಭಿಮಾನಿಗಳು ಆಗ್ರಹಿಸಿದರು.
ನಾಗಮಂಗಲ ಪಟ್ಟಣದ ಪ್ರವಾಸಿಮಂದಿರದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಫೈಟರ್ ರವಿ ಬೆಂಬಲಿಗರು,ತಾಲೂಕಿನಲ್ಲಿ ಕಳೆದ ಮೂರು ನಾಲ್ಕು ದಿನಗಳಿಂದ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಆಡಿಯೋದಲ್ಲಿ ಶಾಸಕ ಸುರೇಶ್ ಗೌಡ ಅವರು ಕಾಂಗ್ರೆಸ್ ಪಕ್ಷದ ಕಾರ್ಯಕರ್ತನೊಂದಿಗೆ ದೂರವಾಣಿಯಲ್ಲಿ ಮಾತನಾಡುತ್ತಿರುವ ಸಂದರ್ಭದಲ್ಲಿ ಸಮಾಜ ಸೇವಕರಾದ ಫೈಟರ್ ರವಿ ರವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವುದು ಅವರಿಗೆ ಶೋಭೆ ತರುವಂತದ್ದಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರವಿ ಅವರು ಅವರ ಪಾಡಿಗೆ ಸಮಾಜ ಸೇವೆಯಲ್ಲಿ ತೊಡಗಿದ್ದರೂ ಸುರೇಶ್ ಗೌಡರು ಅವರ ವಿರುದ್ಧ ಬಾಯಿಗೆ ಬಂದ ಹಾಗೆ ಮಾತನಾಡಿದ್ದಾರೆ.ಶಾಸಕರು ನಾಲಿಗೆ ಬಿಗಿ ಹಿಡಿದು ಮಾತನಾಡಲಿ.ಈ ಕೂಡಲೇ ಶಾಸಕ ಸುರೇಶ್ ಗೌಡರು ಸಾರ್ವಜನಿಕರ ಮತ್ತು ಫೈಟರ್ ರವಿ ಮಲ್ಲುಕಾರ್ಜುನ್ ರವರ ಬಳಿ ಬಹಿರಂಗವಾಗಿ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿದರು. ಸುದ್ದಿಗೋಷ್ಠಿಯಲ್ಲಿ ಪವನ್, ಸತೀಶ್, ಮುಬಾರಕ್, ಸಲ್ಮಾನ್, ಅರ್ಜುನ್,ಆಸಿಫ್ ಉಪಸ್ಥಿತರಿದ್ದರು.